ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

June 23, 2025
11:32 AM

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ, ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ವಿಮೆ ಯೋಜನೆ ಜಾರಿಗೆ ತರಲಾಗಿದೆ. ಜಿಲ್ಲೆಯಲ್ಲಿ ಮುಖ್ಯ ಬೆಳೆಯಾಗಿ ರಾಗಿ, ಭತ್ತ, ಮುಸುಕಿನಜೋಳ,  ತೊಗರಿ, ನೆಲಗಡಲೆ, ಹುರುಳಿ ಮತ್ತು ಟೊಮ್ಯಾಟೋ ಬೆಳೆಗಳನ್ನು ಇತೆರೆ ಬೆಳೆಗಳಾಗಿ ಅಧಿಸೂಚಿಸಲಾಗಿದೆ. ಟೊಮ್ಯಾಟೋ ಮತ್ತು ತೊಗರಿ ಬೆಳೆಗೆ ಜುಲೈ 15, ನೆಲಗಡಲೆ ಬೆಳೆಗೆ ಜುಲೈ 31 ಹಾಗೂ ಉಳಿದಂತೆ ರಾಗಿ, ಭತ್ತ, ಮುಸುಕಿನ ಜೋಳ ಮತ್ತು ಹುರುಳಿ ಬೆಳೆಗಳಿಗೆ ಆಗಸ್ಟ್ 16 ರವರೆಗೆ ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತ ರೈತರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಬಿ.ಜಿ.ಕಲಾವತಿ ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |
July 9, 2025
10:57 AM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.
July 9, 2025
7:44 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್
July 9, 2025
7:18 AM
by: ದ ರೂರಲ್ ಮಿರರ್.ಕಾಂ
ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | ದೆಹಲಿಗೆ ಎಲ್ಲೋ ಅಲರ್ಟ್‌ – ಮಳೆ ಎಲ್ಲೆಲ್ಲಿ…?
July 9, 2025
7:06 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group