2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ, ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ವಿಮೆ ಯೋಜನೆ ಜಾರಿಗೆ ತರಲಾಗಿದೆ. ಜಿಲ್ಲೆಯಲ್ಲಿ ಮುಖ್ಯ ಬೆಳೆಯಾಗಿ ರಾಗಿ, ಭತ್ತ, ಮುಸುಕಿನಜೋಳ, ತೊಗರಿ, ನೆಲಗಡಲೆ, ಹುರುಳಿ ಮತ್ತು ಟೊಮ್ಯಾಟೋ ಬೆಳೆಗಳನ್ನು ಇತೆರೆ ಬೆಳೆಗಳಾಗಿ ಅಧಿಸೂಚಿಸಲಾಗಿದೆ. ಟೊಮ್ಯಾಟೋ ಮತ್ತು ತೊಗರಿ ಬೆಳೆಗೆ ಜುಲೈ 15, ನೆಲಗಡಲೆ ಬೆಳೆಗೆ ಜುಲೈ 31 ಹಾಗೂ ಉಳಿದಂತೆ ರಾಗಿ, ಭತ್ತ, ಮುಸುಕಿನ ಜೋಳ ಮತ್ತು ಹುರುಳಿ ಬೆಳೆಗಳಿಗೆ ಆಗಸ್ಟ್ 16 ರವರೆಗೆ ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತ ರೈತರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಬಿ.ಜಿ.ಕಲಾವತಿ ತಿಳಿಸಿದ್ದಾರೆ.
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…
ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…