2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ, ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ವಿಮೆ ಯೋಜನೆ ಜಾರಿಗೆ ತರಲಾಗಿದೆ. ಜಿಲ್ಲೆಯಲ್ಲಿ ಮುಖ್ಯ ಬೆಳೆಯಾಗಿ ರಾಗಿ, ಭತ್ತ, ಮುಸುಕಿನಜೋಳ, ತೊಗರಿ, ನೆಲಗಡಲೆ, ಹುರುಳಿ ಮತ್ತು ಟೊಮ್ಯಾಟೋ ಬೆಳೆಗಳನ್ನು ಇತೆರೆ ಬೆಳೆಗಳಾಗಿ ಅಧಿಸೂಚಿಸಲಾಗಿದೆ. ಟೊಮ್ಯಾಟೋ ಮತ್ತು ತೊಗರಿ ಬೆಳೆಗೆ ಜುಲೈ 15, ನೆಲಗಡಲೆ ಬೆಳೆಗೆ ಜುಲೈ 31 ಹಾಗೂ ಉಳಿದಂತೆ ರಾಗಿ, ಭತ್ತ, ಮುಸುಕಿನ ಜೋಳ ಮತ್ತು ಹುರುಳಿ ಬೆಳೆಗಳಿಗೆ ಆಗಸ್ಟ್ 16 ರವರೆಗೆ ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತ ರೈತರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳು, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ಪ್ರತಿನಿಧಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಬಿ.ಜಿ.ಕಲಾವತಿ ತಿಳಿಸಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…