Advertisement
ಸುದ್ದಿಗಳು

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

Share

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದ್ದು ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿರುತ್ತದೆ.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕೃಷಿ ಬೆಳೆಗೆ ಸಂಬಂಧಿಸಿದಂತೆ ಭತ್ತವು ನೊಂದಾಯಿತ ಬೆಳೆಯಾಗಿದ್ದು, ಭತ್ತ ಬೆಳೆಯುವ ರೈತರು ಈ ಯೋಜನೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಈ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಯಾವುದೇ ಪ್ರಕೃತಿ ವಿಕೋಪಗಳಿಂದ/ ಹವಾಮಾನ ವೈಪರೀತ್ಯದಿಂದಾಗಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ ಶೇ.25ರ ಭಾಗವನ್ನು, ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ.50ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇ.25 ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುತ್ತದೆ. ಕಟಾವಿನ ನಂತರದ ಸಮಯದಲ್ಲಿ ಬೆಳೆಯನ್ನು ಒಣಗಿಸಲು ಬಿಟ್ಟ ಸಂದರ್ಭದಲ್ಲಿ 2 ವಾರದೊಳಗೆ ಅಕಾಲಿಕ ಮಳೆ/ಚಂಡಮಾರುತ ಸಹಿತ ಮಳೆಯಿಂದಾಗಿ ಕಟಾವು ಮಾಡಲಾದ ಬೆಳೆಯು ನಾಶವಾದರೆ ವಿಮಾ ಸಂಸ್ಥೆಯು ವೈಯಕ್ತಿಕವಾಗಿ ಬೆಳೆ ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥ ಪಡಿಸುತ್ತದೆ.

ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಭೂಕುಸಿತ, ಬೆಳೆ ಮುಳುಗಡೆ, ಆಲಿಕಲ್ಲು ಮಳೆಯಿಂದ ಉಂಟಾಗುವ ನಷ್ಟವನ್ನು ವೈಯಕ್ತಿಕ ಕ್ಷೇತ್ರವಾರು ನಿರ್ಧರಿಸಿ ರೈತರಿಗೆ ಬೆಳೆವಿಮಾ ನಷ್ಟ ಪರಿಹಾರವನ್ನು ನೀಡಲಾಗುತ್ತದೆ. 2025 ನೇ ಸಾಲಿನ ಮುಂಗಾರಿಗೆ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಭತ್ತದ ಬೆಳೆಗೆ ನೊಂದಾಯಿಸಲು ಆಗಸ್ಟ್ 16 ಕೊನೆಯ ದಿನ. ಪ್ರತಿ ಎಕರೆಗೆ ವಿಮಾ ಮೊತ್ತ ರೂ.25800 ಆಗಿರುತ್ತದೆ ಹಾಗೂ ವಿಮಾ ಕಂತು (ರೈತರ ವಂತಿಕೆ) ಒಂದು ಎಕರೆಗೆ ರೂ.516 ಇರುತ್ತದೆ. ಅರ್ಹ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹತ್ತಿರದ ಬ್ಯಾಂಕುಗಳಲ್ಲಿ ನಿಗದಿತ ದಿನಾಂಕದೊಳಗೆ ವಿಮಾ ಕಂತಿನ ಮೊತ್ತವನ್ನು ಪಾವತಿಸಬೇಕಾಗಿ ಮತ್ತು ವಿಮೆ ಮಾಡಿಸಿದ ರೈತರು ಬೆಳೆ ನಷ್ಟದ ಬಗ್ಗೆ ಸಂಬಂಧಿಸಿದ ಹಣಕಾಸು ಸಂಸ್ಥೆ ಅಥವಾ ವಿಮಾಸಂಸ್ಥೆ ಕಛೇರಿಗಳಿಗೆ ನಷ್ಟ ಸಂಭವಿಸಿದ 72 ಗಂಟೆಯೊಳಗೆ ವಿಮೆ ಮಾಡಿಸಲಾದ ಬೆಳೆ ವಿವರ, ಹಾನಿಯ ವ್ಯಾಪ್ತಿ ಹಾಗೂ ಹಾನಿಯ ಕಾರಣವನ್ನು ತಿಳಿಸಬೇಕಾಗುತ್ತದೆ.

ಬೆಳೆ ಸಾಲ ಪಡೆದ/ಪಡೆಯದ ರೈತರಿಗೆ ಬೆಳೆ ವಿಮೆ ಐಚ್ಛಿಕ. ರೈತರು ನೋಂದಣಿಗಾಗಿ ಕಡ್ಡಾಯವಾಗಿ ಫ್ರೂಟ್ಸ್ ಐ.ಡಿ. (FID) ಹೊಂದಿರಬೇಕು. ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಚ್ಚಿಸದಿದ್ದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಕೊನೆಯ ದಿನಾಂಕದ ಒಂದು ವಾರದ ಮೊದಲು ಈ ಕುರಿತು ಮುಚ್ಚಳಿಕೆ ಪತ್ರ ನೀಡಬೇಕು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

7 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

11 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

12 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

14 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

15 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago