ವನ್ಯಜೀವಿಗಳ ದಾಳಿಯಿಂದ ಹಾನಿಗೀಡಾದ ಕೃಷಿ ಬೆಳೆಗಳು ಮತ್ತು ಜಲಾವೃತದಿಂದ ಬಾಧಿತವಾದ ಭತ್ತಕ್ಕೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನಷ್ಟ ಭರಿಸಲು ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ನಿರ್ಧರಿಸಿರುವುದಕ್ಕೆ ಚಾಮರಾಜನಗರ ಜಿಲ್ಲೆಯಲ್ಲಿ ರೈತರು ಸಂತಸ ಹಂಚಿಕೊಂಡಿದ್ದಾರೆ.
ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರೈತರು ಹರ್ಷ ವ್ಯಕ್ತಪಡಿಸಿದ್ದು, ರೈತರು ಬೆಳೆ ವಿಮಾ ಅಪ್ಲಿಕೇಷನ್ ಮೂಲಕ 72 ಗಂಟೆಗಳ ಒಳಗಾಗಿ ಅಪ್ ಲೋಡ್ ಮಾಡಿ ನಷ್ಟದ ವರದಿ ಮಾಡುವಂತೆ ತಿಳಿಸಿದೆ. ಕಾಡಂಚಿನ ಪ್ರದೇಶದಲ್ಲಿರುವ ಜಮೀನುಗಳಿಗೆ ಕಾಡುಪ್ರಾಣಿಗಳು ದಾಳಿ ನಡೆಸಿ ಬೆಳೆ ನಾಶ ಪಡಿಸಿದ ಸಂದರ್ಭದಲ್ಲಿ ಉಂಟಾಗುವ ನಷ್ಟವನ್ನು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕಟ್ಟಿಕೊಡಲು ಕೇಂದ್ರ ಸರ್ಕಾರ ತೀರ್ಮಾನಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ರೈತ ಅನಗಳ್ಳಿ ಬಸವರಾಜ್ ಹೇಳುತ್ತಾರೆ.
ವನ್ಯಜೀವಿಗಳ ದಾಳಿಯಿಂದ ಬೆಳೆ ಹಾನಿಯಾದರೆ ಅದನ್ನು ಫಸಲ್ ಬಿಮಾ ಯೋಜನೆಯಡಿ ಸೇರಿಸಿರುವುದು ಹರ್ಷದ ಸಂಗತಿ. ಕೇಂದ್ರದ ಈ ನಿರ್ಧಾರದಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ವರದಾನವಾಗಲಿದೆ ಎನ್ನುತ್ತಾರೆ ರೈತ ವೀರಭದ್ರಸ್ವಾಮಿ.
ಕಾಡುಪ್ರಾಣಿಗಳ ದಾಳಿಯಿಂದ ಕಾಡಂಚಿನ ಗ್ರಾಮದಲ್ಲಿ ಬೆಳೆ ನಷ್ಟ ಅನುಭವಿಸಿದರೆ ಅದಕ್ಕೆ ಪರಿಹಾರ ನೀಡಲು ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ರೈತ ಮಲೆಯೂರು ಮಹೇಂದ್ರ ಹೇಳುತ್ತಾರೆ.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…