Advertisement
MIRROR FOCUS

ವನ್ಯಜೀವಿಗಳಿಂದ ಬೆಳೆ ಹಾನಿ | ಫಸಲ್ ಬಿಮಾ ಯೋಜನೆ ವ್ಯಾಪ್ತಿಗೆ ಸೇರ್ಪಡೆ

Share

ವನ್ಯಜೀವಿಗಳ ದಾಳಿಯಿಂದ ಹಾನಿಗೀಡಾದ ಕೃಷಿ ಬೆಳೆಗಳು ಮತ್ತು ಜಲಾವೃತದಿಂದ ಬಾಧಿತವಾದ ಭತ್ತಕ್ಕೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನಷ್ಟ ಭರಿಸಲು ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ನಿರ್ಧರಿಸಿರುವುದಕ್ಕೆ ಚಾಮರಾಜನಗರ ಜಿಲ್ಲೆಯಲ್ಲಿ ರೈತರು ಸಂತಸ ಹಂಚಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರೈತರು ಹರ್ಷ ವ್ಯಕ್ತಪಡಿಸಿದ್ದು, ರೈತರು ಬೆಳೆ ವಿಮಾ ಅಪ್ಲಿಕೇಷನ್ ಮೂಲಕ 72 ಗಂಟೆಗಳ ಒಳಗಾಗಿ ಅಪ್ ಲೋಡ್ ಮಾಡಿ ನಷ್ಟದ ವರದಿ ಮಾಡುವಂತೆ ತಿಳಿಸಿದೆ.  ಕಾಡಂಚಿನ ಪ್ರದೇಶದಲ್ಲಿರುವ ಜಮೀನುಗಳಿಗೆ ಕಾಡುಪ್ರಾಣಿಗಳು ದಾಳಿ ನಡೆಸಿ ಬೆಳೆ ನಾಶ ಪಡಿಸಿದ ಸಂದರ್ಭದಲ್ಲಿ ಉಂಟಾಗುವ ನಷ್ಟವನ್ನು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕಟ್ಟಿಕೊಡಲು ಕೇಂದ್ರ ಸರ್ಕಾರ ತೀರ್ಮಾನಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ರೈತ ಅನಗಳ್ಳಿ ಬಸವರಾಜ್ ಹೇಳುತ್ತಾರೆ.

ವನ್ಯಜೀವಿಗಳ ದಾಳಿಯಿಂದ ಬೆಳೆ ಹಾನಿಯಾದರೆ ಅದನ್ನು ಫಸಲ್ ಬಿಮಾ ಯೋಜನೆಯಡಿ ಸೇರಿಸಿರುವುದು ಹರ್ಷದ ಸಂಗತಿ. ಕೇಂದ್ರದ ಈ ನಿರ್ಧಾರದಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ವರದಾನವಾಗಲಿದೆ  ಎನ್ನುತ್ತಾರೆ ರೈತ ವೀರಭದ್ರಸ್ವಾಮಿ.

ಕಾಡುಪ್ರಾಣಿಗಳ ದಾಳಿಯಿಂದ ಕಾಡಂಚಿನ ಗ್ರಾಮದಲ್ಲಿ ಬೆಳೆ ನಷ್ಟ ಅನುಭವಿಸಿದರೆ ಅದಕ್ಕೆ ಪರಿಹಾರ ನೀಡಲು ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ರೈತ ಮಲೆಯೂರು ಮಹೇಂದ್ರ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

7 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

8 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

10 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

11 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

18 hours ago