ವನ್ಯಜೀವಿಗಳ ದಾಳಿಯಿಂದ ಹಾನಿಗೀಡಾದ ಕೃಷಿ ಬೆಳೆಗಳು ಮತ್ತು ಜಲಾವೃತದಿಂದ ಬಾಧಿತವಾದ ಭತ್ತಕ್ಕೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನಷ್ಟ ಭರಿಸಲು ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ನಿರ್ಧರಿಸಿರುವುದಕ್ಕೆ ಚಾಮರಾಜನಗರ ಜಿಲ್ಲೆಯಲ್ಲಿ ರೈತರು ಸಂತಸ ಹಂಚಿಕೊಂಡಿದ್ದಾರೆ.
ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರೈತರು ಹರ್ಷ ವ್ಯಕ್ತಪಡಿಸಿದ್ದು, ರೈತರು ಬೆಳೆ ವಿಮಾ ಅಪ್ಲಿಕೇಷನ್ ಮೂಲಕ 72 ಗಂಟೆಗಳ ಒಳಗಾಗಿ ಅಪ್ ಲೋಡ್ ಮಾಡಿ ನಷ್ಟದ ವರದಿ ಮಾಡುವಂತೆ ತಿಳಿಸಿದೆ. ಕಾಡಂಚಿನ ಪ್ರದೇಶದಲ್ಲಿರುವ ಜಮೀನುಗಳಿಗೆ ಕಾಡುಪ್ರಾಣಿಗಳು ದಾಳಿ ನಡೆಸಿ ಬೆಳೆ ನಾಶ ಪಡಿಸಿದ ಸಂದರ್ಭದಲ್ಲಿ ಉಂಟಾಗುವ ನಷ್ಟವನ್ನು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕಟ್ಟಿಕೊಡಲು ಕೇಂದ್ರ ಸರ್ಕಾರ ತೀರ್ಮಾನಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ರೈತ ಅನಗಳ್ಳಿ ಬಸವರಾಜ್ ಹೇಳುತ್ತಾರೆ.
ವನ್ಯಜೀವಿಗಳ ದಾಳಿಯಿಂದ ಬೆಳೆ ಹಾನಿಯಾದರೆ ಅದನ್ನು ಫಸಲ್ ಬಿಮಾ ಯೋಜನೆಯಡಿ ಸೇರಿಸಿರುವುದು ಹರ್ಷದ ಸಂಗತಿ. ಕೇಂದ್ರದ ಈ ನಿರ್ಧಾರದಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ವರದಾನವಾಗಲಿದೆ ಎನ್ನುತ್ತಾರೆ ರೈತ ವೀರಭದ್ರಸ್ವಾಮಿ.
ಕಾಡುಪ್ರಾಣಿಗಳ ದಾಳಿಯಿಂದ ಕಾಡಂಚಿನ ಗ್ರಾಮದಲ್ಲಿ ಬೆಳೆ ನಷ್ಟ ಅನುಭವಿಸಿದರೆ ಅದಕ್ಕೆ ಪರಿಹಾರ ನೀಡಲು ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ರೈತ ಮಲೆಯೂರು ಮಹೇಂದ್ರ ಹೇಳುತ್ತಾರೆ.
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…
ಜೈಸಲ್ಮೇರ್ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…