ವನ್ಯಜೀವಿಗಳ ದಾಳಿಯಿಂದ ಹಾನಿಗೀಡಾದ ಕೃಷಿ ಬೆಳೆಗಳು ಮತ್ತು ಜಲಾವೃತದಿಂದ ಬಾಧಿತವಾದ ಭತ್ತಕ್ಕೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನಷ್ಟ ಭರಿಸಲು ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ನಿರ್ಧರಿಸಿರುವುದಕ್ಕೆ ಚಾಮರಾಜನಗರ ಜಿಲ್ಲೆಯಲ್ಲಿ ರೈತರು ಸಂತಸ ಹಂಚಿಕೊಂಡಿದ್ದಾರೆ.
ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರೈತರು ಹರ್ಷ ವ್ಯಕ್ತಪಡಿಸಿದ್ದು, ರೈತರು ಬೆಳೆ ವಿಮಾ ಅಪ್ಲಿಕೇಷನ್ ಮೂಲಕ 72 ಗಂಟೆಗಳ ಒಳಗಾಗಿ ಅಪ್ ಲೋಡ್ ಮಾಡಿ ನಷ್ಟದ ವರದಿ ಮಾಡುವಂತೆ ತಿಳಿಸಿದೆ. ಕಾಡಂಚಿನ ಪ್ರದೇಶದಲ್ಲಿರುವ ಜಮೀನುಗಳಿಗೆ ಕಾಡುಪ್ರಾಣಿಗಳು ದಾಳಿ ನಡೆಸಿ ಬೆಳೆ ನಾಶ ಪಡಿಸಿದ ಸಂದರ್ಭದಲ್ಲಿ ಉಂಟಾಗುವ ನಷ್ಟವನ್ನು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕಟ್ಟಿಕೊಡಲು ಕೇಂದ್ರ ಸರ್ಕಾರ ತೀರ್ಮಾನಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ರೈತ ಅನಗಳ್ಳಿ ಬಸವರಾಜ್ ಹೇಳುತ್ತಾರೆ.
ವನ್ಯಜೀವಿಗಳ ದಾಳಿಯಿಂದ ಬೆಳೆ ಹಾನಿಯಾದರೆ ಅದನ್ನು ಫಸಲ್ ಬಿಮಾ ಯೋಜನೆಯಡಿ ಸೇರಿಸಿರುವುದು ಹರ್ಷದ ಸಂಗತಿ. ಕೇಂದ್ರದ ಈ ನಿರ್ಧಾರದಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ವರದಾನವಾಗಲಿದೆ ಎನ್ನುತ್ತಾರೆ ರೈತ ವೀರಭದ್ರಸ್ವಾಮಿ.
ಕಾಡುಪ್ರಾಣಿಗಳ ದಾಳಿಯಿಂದ ಕಾಡಂಚಿನ ಗ್ರಾಮದಲ್ಲಿ ಬೆಳೆ ನಷ್ಟ ಅನುಭವಿಸಿದರೆ ಅದಕ್ಕೆ ಪರಿಹಾರ ನೀಡಲು ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ರೈತ ಮಲೆಯೂರು ಮಹೇಂದ್ರ ಹೇಳುತ್ತಾರೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…