ವನ್ಯಜೀವಿಗಳ ದಾಳಿಯಿಂದ ಹಾನಿಗೀಡಾದ ಕೃಷಿ ಬೆಳೆಗಳು ಮತ್ತು ಜಲಾವೃತದಿಂದ ಬಾಧಿತವಾದ ಭತ್ತಕ್ಕೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನಷ್ಟ ಭರಿಸಲು ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ನಿರ್ಧರಿಸಿರುವುದಕ್ಕೆ ಚಾಮರಾಜನಗರ ಜಿಲ್ಲೆಯಲ್ಲಿ ರೈತರು ಸಂತಸ ಹಂಚಿಕೊಂಡಿದ್ದಾರೆ.
ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರೈತರು ಹರ್ಷ ವ್ಯಕ್ತಪಡಿಸಿದ್ದು, ರೈತರು ಬೆಳೆ ವಿಮಾ ಅಪ್ಲಿಕೇಷನ್ ಮೂಲಕ 72 ಗಂಟೆಗಳ ಒಳಗಾಗಿ ಅಪ್ ಲೋಡ್ ಮಾಡಿ ನಷ್ಟದ ವರದಿ ಮಾಡುವಂತೆ ತಿಳಿಸಿದೆ. ಕಾಡಂಚಿನ ಪ್ರದೇಶದಲ್ಲಿರುವ ಜಮೀನುಗಳಿಗೆ ಕಾಡುಪ್ರಾಣಿಗಳು ದಾಳಿ ನಡೆಸಿ ಬೆಳೆ ನಾಶ ಪಡಿಸಿದ ಸಂದರ್ಭದಲ್ಲಿ ಉಂಟಾಗುವ ನಷ್ಟವನ್ನು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕಟ್ಟಿಕೊಡಲು ಕೇಂದ್ರ ಸರ್ಕಾರ ತೀರ್ಮಾನಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ರೈತ ಅನಗಳ್ಳಿ ಬಸವರಾಜ್ ಹೇಳುತ್ತಾರೆ.
ವನ್ಯಜೀವಿಗಳ ದಾಳಿಯಿಂದ ಬೆಳೆ ಹಾನಿಯಾದರೆ ಅದನ್ನು ಫಸಲ್ ಬಿಮಾ ಯೋಜನೆಯಡಿ ಸೇರಿಸಿರುವುದು ಹರ್ಷದ ಸಂಗತಿ. ಕೇಂದ್ರದ ಈ ನಿರ್ಧಾರದಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ವರದಾನವಾಗಲಿದೆ ಎನ್ನುತ್ತಾರೆ ರೈತ ವೀರಭದ್ರಸ್ವಾಮಿ.
ಕಾಡುಪ್ರಾಣಿಗಳ ದಾಳಿಯಿಂದ ಕಾಡಂಚಿನ ಗ್ರಾಮದಲ್ಲಿ ಬೆಳೆ ನಷ್ಟ ಅನುಭವಿಸಿದರೆ ಅದಕ್ಕೆ ಪರಿಹಾರ ನೀಡಲು ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ರೈತ ಮಲೆಯೂರು ಮಹೇಂದ್ರ ಹೇಳುತ್ತಾರೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…