Advertisement
MIRROR FOCUS

ವನ್ಯಜೀವಿಗಳಿಂದ ಬೆಳೆ ಹಾನಿ | ಫಸಲ್ ಬಿಮಾ ಯೋಜನೆ ವ್ಯಾಪ್ತಿಗೆ ಸೇರ್ಪಡೆ

Share

ವನ್ಯಜೀವಿಗಳ ದಾಳಿಯಿಂದ ಹಾನಿಗೀಡಾದ ಕೃಷಿ ಬೆಳೆಗಳು ಮತ್ತು ಜಲಾವೃತದಿಂದ ಬಾಧಿತವಾದ ಭತ್ತಕ್ಕೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನಷ್ಟ ಭರಿಸಲು ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ನಿರ್ಧರಿಸಿರುವುದಕ್ಕೆ ಚಾಮರಾಜನಗರ ಜಿಲ್ಲೆಯಲ್ಲಿ ರೈತರು ಸಂತಸ ಹಂಚಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರೈತರು ಹರ್ಷ ವ್ಯಕ್ತಪಡಿಸಿದ್ದು, ರೈತರು ಬೆಳೆ ವಿಮಾ ಅಪ್ಲಿಕೇಷನ್ ಮೂಲಕ 72 ಗಂಟೆಗಳ ಒಳಗಾಗಿ ಅಪ್ ಲೋಡ್ ಮಾಡಿ ನಷ್ಟದ ವರದಿ ಮಾಡುವಂತೆ ತಿಳಿಸಿದೆ.  ಕಾಡಂಚಿನ ಪ್ರದೇಶದಲ್ಲಿರುವ ಜಮೀನುಗಳಿಗೆ ಕಾಡುಪ್ರಾಣಿಗಳು ದಾಳಿ ನಡೆಸಿ ಬೆಳೆ ನಾಶ ಪಡಿಸಿದ ಸಂದರ್ಭದಲ್ಲಿ ಉಂಟಾಗುವ ನಷ್ಟವನ್ನು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕಟ್ಟಿಕೊಡಲು ಕೇಂದ್ರ ಸರ್ಕಾರ ತೀರ್ಮಾನಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ರೈತ ಅನಗಳ್ಳಿ ಬಸವರಾಜ್ ಹೇಳುತ್ತಾರೆ.

ವನ್ಯಜೀವಿಗಳ ದಾಳಿಯಿಂದ ಬೆಳೆ ಹಾನಿಯಾದರೆ ಅದನ್ನು ಫಸಲ್ ಬಿಮಾ ಯೋಜನೆಯಡಿ ಸೇರಿಸಿರುವುದು ಹರ್ಷದ ಸಂಗತಿ. ಕೇಂದ್ರದ ಈ ನಿರ್ಧಾರದಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರಿಗೆ ವರದಾನವಾಗಲಿದೆ  ಎನ್ನುತ್ತಾರೆ ರೈತ ವೀರಭದ್ರಸ್ವಾಮಿ.

ಕಾಡುಪ್ರಾಣಿಗಳ ದಾಳಿಯಿಂದ ಕಾಡಂಚಿನ ಗ್ರಾಮದಲ್ಲಿ ಬೆಳೆ ನಷ್ಟ ಅನುಭವಿಸಿದರೆ ಅದಕ್ಕೆ ಪರಿಹಾರ ನೀಡಲು ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ರೈತ ಮಲೆಯೂರು ಮಹೇಂದ್ರ ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

8 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

9 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

22 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago