Advertisement
MIRROR FOCUS

ರೈತರ ನೆರವಿಗಾಗಿ ಇರುವ ಬೆಳೆ ವಿಮೆ ಯೋಜನೆ | ಈ ಬಗ್ಗೆ ರೈತರಿಗೆ ಅನುಮಾನ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ – ಕೃಷಿ ಸಚಿವ ಚಲುವರಾಯಸ್ವಾಮಿ

Share

ಕೆಲವು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ(Karnataka) ರೈತರ(Farmers) ಹಿತ ಕಾಪಾಡುವ ಸಾಲ ಸೌಲಭ್ಯ(Loan Facility), ಬೆಳೆ ವಿಮೆ(Crop insurance), ಸಬ್ಸಿಡಿ(Subsidy) ದರದಲ್ಲಿ ಕೃಷಿ ಯಂತ್ರೋಪಕರಣಗಳ(Agricultural instrument) ಸೌಲಭ್ಯ ಎಲ್ಲ ಇದೆ. ಆದರೆ ಕೆಲವೊಂದು ಸೌಲಭ್ಯಗಳು ರೈತರಿಗೆ ಸರಿಯಾದ ರೀತಿಯಲ್ಲಿ ತಲುಪುತ್ತಿಲ್ಲ. ಈ ನಿಟ್ಟಿನಲ್ಲಿ ರೈತರ ನೆರವಿಗಾಗಿ ಸರ್ಕಾರ(Govt) ರೂಪಿಸಿರುವ ಬೆಳೆ ವಿಮೆ ಯೋಜನೆಯ(Crop Insurance Scheme) ಸಂಪೂರ್ಣವಾಗಿ ಫಲ ಕೃಷಿಕರಿಗೆ ಹೋಗುತ್ತಿಲ್ಲ, ಹಾಗಾಗಿ ಇದನ್ನು ಇನ್ನಷ್ಟು ಪಾರದರ್ಶಕಗೊಳಿಸಿ ಎಲ್ಲರ ಅನುಮಾನಗಳನ್ನು ಸಂಪೂರ್ಣವಾಗಿ ಬಗೆಹರಿಸಿ ಎಂದು ಕೃಷಿ ಸಚಿವ(Agricultural Minister) ಎನ್. ಚಲುವರಾಯಸ್ವಾಮಿ(N Chaluvaraya Swami) ನಿರ್ದೇಶನ ನೀಡಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಂದು ಕರ್ನಾಟಕ ರಾಜ್ಯ ಬೀಜ ನಿಗಮದ 313ನೇ ನಿರ್ದೇಶಕ ಮಂಡಳಿ ಸಭೆ ನಡೆಸಿದ ಸಚಿವರು, ಇಲಾಖೆಯ ಯಾವುದೇ ಅಧಿಕಾರಿಗಳು ಏಜೆನ್ಸಿಗಳ ಪರ ಇಲ್ಲವೇ ಇಲ್ಲ. ನಾವೆಲ್ಲರೂ ರೈತರಿಗಾಗಿ ಕೆಲಸ ಮಾಡುತ್ತಿದ್ದೇವೆ. ಆದರೂ ಕೆಲವು ರೈತರು, ಜನಪ್ರತಿನಿಧಿಗಳಲ್ಲಿರುವ ಅನುಮಾನಗಳನ್ನ ವ್ಯವಸ್ಥಿತವಾಗಿ ಮನವರಿಕೆ ಮಾಡಿಕೊಟ್ಟು ಬಗೆಹರಿಸಬೇಕು. ಇದಕ್ಕಾಗಿ ಒಂದು ಸಭೆ ಆಯೋಜಿಸುವಂತೆ ಚಲುವರಾಯಸ್ವಾಮಿ ಸೂಚಿಸಿದರು.

ತಳ ಹಂತದಿಂದ ಮೇಲುಮಟ್ಟದವರೆಗೆ ಯಾವುದೇ ಅಧಿಕಾರಿ, ಸಿಬ್ಬಂದಿ ಬೆಳೆ ವಿಮೆ ಕಂಪನಿಗಳಿಂದ ಒಂದು ಸಣ್ಣ ಅನುಕೂಲವನ್ನೂ ಪಡೆಯುತ್ತಿಲ್ಲ. ಆದರೂ, ಮುಂದೆಯೂ ಸಹ ಯಾವುದೇ ಸಂದರ್ಭದಲ್ಲಿಯೂ ನಡೆಯಬಾರದು ಎಂದು ಕೃಷಿ ಸಚಿವರು ತಾಕೀತು ಮಾಡಿದರು. ಇದೇ ವೇಳೆ, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಭುಕುಮಾರ್ ಮತ್ತು ಆಯುಕ್ತ ವೈ.ಎಸ್. ಪಾಟೀಲ್ ಅವರು, ಬೆಳೆ ಸಮೀಕ್ಷೆ ಕೇವಲ ಕೃಷಿ ಇಲಾಖೆಗಳಿಂದ ಆಗುತ್ತಿಲ್ಲ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗುವ ವಿವಿಧ ಇಲಾಖೆ ಅಧಿಕಾರಿಗಳ ಸಮಿತಿಯಿಂದ ನಡೆಯುತ್ತಿದ್ದು, ಯಾವುದೇ ಲೋಪಗಳಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ರಾಜ್ಯ ಬೀಜ ನಿಗಮ ಇನ್ನಷ್ಟು ಕೃಷಿಗೆ ಪೂರಕ ಯೋಜನೆಗಳೊಂದಿಗೆ ಕೆಲಸ ಮಾಡಬೇಕು. ಮದ್ಯವರ್ತಿಗಳಿಗೆ ಅವಕಾಶ ನೀಡದೇ ಲಾಭದ ರೈತರ ಪಾಲು ಸಂಪೂರ್ಣ ನೇರ ವರ್ಗಾವಣೆಯಾಗಬೇಕು ಎಂದು ಸಚಿವರು ಹೇಳಿದರು.ನಿಗಮದ ಸೇವೆಯಲ್ಲಿ ಗುಣಾತ್ಮಕ ಬದಲವಣೆಯಾಗಬೇಕು ಲಾಭ ಗಳಿಕೆಯೊಂದೇ ಮಾನದಂಡವಾಗದೇ ಸೇವಾರ್ಪತೆ, ಧಕ್ಷತೆಯೂ ಬೇಕು ಎಂದು ಸಲಹೆ ನೀಡಿದರು‌.

ಅಕ್ಟೋಬರ್‌ ನಲ್ಲಿ ಚುನಾವಣೆ : ಇದೇ ವೇಳೆ ನಿಗಮಕ್ಕೆ ಬೆಳೆಗಾರ ಪ್ರತಿನಿಧಿಗಳ ಆಯ್ಕೆ ನಡೆಯುವ ಚುನಾವಣೆಯಲ್ಲಿ ಅಕ್ಟೋಬರ್ 15ರ ನಂತರ ನಡೆಸಲು ಕ್ರಮ ವಹಿಸುವಂತೆ ಸಚಿವರು ಹೇಳಿದರು. ಕರ್ನಾಟಕ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೇವರಾಜ್, ತೋಟಗಾರಿಕೆ ನಿರ್ದೇಶಕ ರಮೇಶ್, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿ ಹೊನ್ನಲಿಂಗಪ್ಪ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

7 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago