Advertisement
MIRROR FOCUS

ರೈತರ ನೆರವಿಗಾಗಿ ಇರುವ ಬೆಳೆ ವಿಮೆ ಯೋಜನೆ | ಈ ಬಗ್ಗೆ ರೈತರಿಗೆ ಅನುಮಾನ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ – ಕೃಷಿ ಸಚಿವ ಚಲುವರಾಯಸ್ವಾಮಿ

Share

ಕೆಲವು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ(Karnataka) ರೈತರ(Farmers) ಹಿತ ಕಾಪಾಡುವ ಸಾಲ ಸೌಲಭ್ಯ(Loan Facility), ಬೆಳೆ ವಿಮೆ(Crop insurance), ಸಬ್ಸಿಡಿ(Subsidy) ದರದಲ್ಲಿ ಕೃಷಿ ಯಂತ್ರೋಪಕರಣಗಳ(Agricultural instrument) ಸೌಲಭ್ಯ ಎಲ್ಲ ಇದೆ. ಆದರೆ ಕೆಲವೊಂದು ಸೌಲಭ್ಯಗಳು ರೈತರಿಗೆ ಸರಿಯಾದ ರೀತಿಯಲ್ಲಿ ತಲುಪುತ್ತಿಲ್ಲ. ಈ ನಿಟ್ಟಿನಲ್ಲಿ ರೈತರ ನೆರವಿಗಾಗಿ ಸರ್ಕಾರ(Govt) ರೂಪಿಸಿರುವ ಬೆಳೆ ವಿಮೆ ಯೋಜನೆಯ(Crop Insurance Scheme) ಸಂಪೂರ್ಣವಾಗಿ ಫಲ ಕೃಷಿಕರಿಗೆ ಹೋಗುತ್ತಿಲ್ಲ, ಹಾಗಾಗಿ ಇದನ್ನು ಇನ್ನಷ್ಟು ಪಾರದರ್ಶಕಗೊಳಿಸಿ ಎಲ್ಲರ ಅನುಮಾನಗಳನ್ನು ಸಂಪೂರ್ಣವಾಗಿ ಬಗೆಹರಿಸಿ ಎಂದು ಕೃಷಿ ಸಚಿವ(Agricultural Minister) ಎನ್. ಚಲುವರಾಯಸ್ವಾಮಿ(N Chaluvaraya Swami) ನಿರ್ದೇಶನ ನೀಡಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಂದು ಕರ್ನಾಟಕ ರಾಜ್ಯ ಬೀಜ ನಿಗಮದ 313ನೇ ನಿರ್ದೇಶಕ ಮಂಡಳಿ ಸಭೆ ನಡೆಸಿದ ಸಚಿವರು, ಇಲಾಖೆಯ ಯಾವುದೇ ಅಧಿಕಾರಿಗಳು ಏಜೆನ್ಸಿಗಳ ಪರ ಇಲ್ಲವೇ ಇಲ್ಲ. ನಾವೆಲ್ಲರೂ ರೈತರಿಗಾಗಿ ಕೆಲಸ ಮಾಡುತ್ತಿದ್ದೇವೆ. ಆದರೂ ಕೆಲವು ರೈತರು, ಜನಪ್ರತಿನಿಧಿಗಳಲ್ಲಿರುವ ಅನುಮಾನಗಳನ್ನ ವ್ಯವಸ್ಥಿತವಾಗಿ ಮನವರಿಕೆ ಮಾಡಿಕೊಟ್ಟು ಬಗೆಹರಿಸಬೇಕು. ಇದಕ್ಕಾಗಿ ಒಂದು ಸಭೆ ಆಯೋಜಿಸುವಂತೆ ಚಲುವರಾಯಸ್ವಾಮಿ ಸೂಚಿಸಿದರು.

ತಳ ಹಂತದಿಂದ ಮೇಲುಮಟ್ಟದವರೆಗೆ ಯಾವುದೇ ಅಧಿಕಾರಿ, ಸಿಬ್ಬಂದಿ ಬೆಳೆ ವಿಮೆ ಕಂಪನಿಗಳಿಂದ ಒಂದು ಸಣ್ಣ ಅನುಕೂಲವನ್ನೂ ಪಡೆಯುತ್ತಿಲ್ಲ. ಆದರೂ, ಮುಂದೆಯೂ ಸಹ ಯಾವುದೇ ಸಂದರ್ಭದಲ್ಲಿಯೂ ನಡೆಯಬಾರದು ಎಂದು ಕೃಷಿ ಸಚಿವರು ತಾಕೀತು ಮಾಡಿದರು. ಇದೇ ವೇಳೆ, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಭುಕುಮಾರ್ ಮತ್ತು ಆಯುಕ್ತ ವೈ.ಎಸ್. ಪಾಟೀಲ್ ಅವರು, ಬೆಳೆ ಸಮೀಕ್ಷೆ ಕೇವಲ ಕೃಷಿ ಇಲಾಖೆಗಳಿಂದ ಆಗುತ್ತಿಲ್ಲ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗುವ ವಿವಿಧ ಇಲಾಖೆ ಅಧಿಕಾರಿಗಳ ಸಮಿತಿಯಿಂದ ನಡೆಯುತ್ತಿದ್ದು, ಯಾವುದೇ ಲೋಪಗಳಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ರಾಜ್ಯ ಬೀಜ ನಿಗಮ ಇನ್ನಷ್ಟು ಕೃಷಿಗೆ ಪೂರಕ ಯೋಜನೆಗಳೊಂದಿಗೆ ಕೆಲಸ ಮಾಡಬೇಕು. ಮದ್ಯವರ್ತಿಗಳಿಗೆ ಅವಕಾಶ ನೀಡದೇ ಲಾಭದ ರೈತರ ಪಾಲು ಸಂಪೂರ್ಣ ನೇರ ವರ್ಗಾವಣೆಯಾಗಬೇಕು ಎಂದು ಸಚಿವರು ಹೇಳಿದರು.ನಿಗಮದ ಸೇವೆಯಲ್ಲಿ ಗುಣಾತ್ಮಕ ಬದಲವಣೆಯಾಗಬೇಕು ಲಾಭ ಗಳಿಕೆಯೊಂದೇ ಮಾನದಂಡವಾಗದೇ ಸೇವಾರ್ಪತೆ, ಧಕ್ಷತೆಯೂ ಬೇಕು ಎಂದು ಸಲಹೆ ನೀಡಿದರು‌.

ಅಕ್ಟೋಬರ್‌ ನಲ್ಲಿ ಚುನಾವಣೆ : ಇದೇ ವೇಳೆ ನಿಗಮಕ್ಕೆ ಬೆಳೆಗಾರ ಪ್ರತಿನಿಧಿಗಳ ಆಯ್ಕೆ ನಡೆಯುವ ಚುನಾವಣೆಯಲ್ಲಿ ಅಕ್ಟೋಬರ್ 15ರ ನಂತರ ನಡೆಸಲು ಕ್ರಮ ವಹಿಸುವಂತೆ ಸಚಿವರು ಹೇಳಿದರು. ಕರ್ನಾಟಕ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ದೇವರಾಜ್, ತೋಟಗಾರಿಕೆ ನಿರ್ದೇಶಕ ರಮೇಶ್, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿ ಹೊನ್ನಲಿಂಗಪ್ಪ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

44 minutes ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

7 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

9 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

10 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago