ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ ಬೆಳೆಯು ಆಯಾ ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ದಾಖಲಾಗಿರಬೇಕಿರುತ್ತದೆ. ಈ ಯೋಜನೆಯಡಿ ನೋಂದಾವಣೆಗೊಂಡ ಫಲಾನುಭವಿಗಳ ಸರ್ವೆ ನಂಬರ್ ಗಳಲ್ಲಿನ ಬೆಳೆಯ ಮಾಹಿತಿಯು ಬೆಳೆ ಸಮೀಕ್ಷೆಯ ದತ್ತಾಂಶದೊಂದಿಗೆ ತಾಳೆ ಹೊಂದದೇ ಇರುವ ಸಂದರ್ಭದಲ್ಲಿ ಬೆಳೆ ವಿಮೆ ಪರಿಹಾರ ಮೊತ್ತವನ್ನು ಪಾವತಿಸುವ ಮುನ್ನ ಬೆಳೆ ಸಮೀಕ್ಷೆ ಕೈಗೊಂಡು ತದನಂತರ ಪ್ರಕರಣವನ್ನು ಇತ್ಯರ್ಥಪಡಿಸಲಾಗುತ್ತದೆ.
2023-24 ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡು ಬೆಳೆ ಸಮೀಕ್ಷೆಯ ದತ್ತಾಂಶದೊಂದಿಗೆ ತಾಳೆ ಹೊಂದದೇ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಮೇ 31 ಕೊನೆಯ ದಿನ. ಈ ಕುರಿತು ಸಂಬಂಧಿಸಿದ ರೈತರಿಗೆ ಈಗಾಗಲೇ ಮೊಬೈಲ್ ಸಂದೇಶವನ್ನು ಕಳುಹಿಸಲಾಗಿರುತ್ತದೆ. 2023-24 ನೇ ಸಾಲಿನಲ್ಲಿ ಯೋಜನೆಯಡಿ ನೋಂದಾವಣೆಗೊಂಡ ಯಾವುದೇ ರೈತರು ಈ ರೀತಿಯ ಸಂದೇಶವನ್ನು ಸ್ವೀಕರಿಸಿದಲ್ಲಿ, ಬೆಳೆ ಸಾಲ ಹೊಂದಿರುವ ರೈತರು ತಾವು ನೋಂದಾವಣೆಗೊಂಡ ಬ್ಯಾಂಕ್ ಶಾಖೆಯನ್ನು ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ತಾಲೂಕು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…