ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ ಬೆಳೆಯು ಆಯಾ ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ದಾಖಲಾಗಿರಬೇಕಿರುತ್ತದೆ. ಈ ಯೋಜನೆಯಡಿ ನೋಂದಾವಣೆಗೊಂಡ ಫಲಾನುಭವಿಗಳ ಸರ್ವೆ ನಂಬರ್ ಗಳಲ್ಲಿನ ಬೆಳೆಯ ಮಾಹಿತಿಯು ಬೆಳೆ ಸಮೀಕ್ಷೆಯ ದತ್ತಾಂಶದೊಂದಿಗೆ ತಾಳೆ ಹೊಂದದೇ ಇರುವ ಸಂದರ್ಭದಲ್ಲಿ ಬೆಳೆ ವಿಮೆ ಪರಿಹಾರ ಮೊತ್ತವನ್ನು ಪಾವತಿಸುವ ಮುನ್ನ ಬೆಳೆ ಸಮೀಕ್ಷೆ ಕೈಗೊಂಡು ತದನಂತರ ಪ್ರಕರಣವನ್ನು ಇತ್ಯರ್ಥಪಡಿಸಲಾಗುತ್ತದೆ.
2023-24 ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡು ಬೆಳೆ ಸಮೀಕ್ಷೆಯ ದತ್ತಾಂಶದೊಂದಿಗೆ ತಾಳೆ ಹೊಂದದೇ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಮೇ 31 ಕೊನೆಯ ದಿನ. ಈ ಕುರಿತು ಸಂಬಂಧಿಸಿದ ರೈತರಿಗೆ ಈಗಾಗಲೇ ಮೊಬೈಲ್ ಸಂದೇಶವನ್ನು ಕಳುಹಿಸಲಾಗಿರುತ್ತದೆ. 2023-24 ನೇ ಸಾಲಿನಲ್ಲಿ ಯೋಜನೆಯಡಿ ನೋಂದಾವಣೆಗೊಂಡ ಯಾವುದೇ ರೈತರು ಈ ರೀತಿಯ ಸಂದೇಶವನ್ನು ಸ್ವೀಕರಿಸಿದಲ್ಲಿ, ಬೆಳೆ ಸಾಲ ಹೊಂದಿರುವ ರೈತರು ತಾವು ನೋಂದಾವಣೆಗೊಂಡ ಬ್ಯಾಂಕ್ ಶಾಖೆಯನ್ನು ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ತಾಲೂಕು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…