ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ ಬೆಳೆಯು ಆಯಾ ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ದಾಖಲಾಗಿರಬೇಕಿರುತ್ತದೆ. ಈ ಯೋಜನೆಯಡಿ ನೋಂದಾವಣೆಗೊಂಡ ಫಲಾನುಭವಿಗಳ ಸರ್ವೆ ನಂಬರ್ ಗಳಲ್ಲಿನ ಬೆಳೆಯ ಮಾಹಿತಿಯು ಬೆಳೆ ಸಮೀಕ್ಷೆಯ ದತ್ತಾಂಶದೊಂದಿಗೆ ತಾಳೆ ಹೊಂದದೇ ಇರುವ ಸಂದರ್ಭದಲ್ಲಿ ಬೆಳೆ ವಿಮೆ ಪರಿಹಾರ ಮೊತ್ತವನ್ನು ಪಾವತಿಸುವ ಮುನ್ನ ಬೆಳೆ ಸಮೀಕ್ಷೆ ಕೈಗೊಂಡು ತದನಂತರ ಪ್ರಕರಣವನ್ನು ಇತ್ಯರ್ಥಪಡಿಸಲಾಗುತ್ತದೆ.
2023-24 ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡು ಬೆಳೆ ಸಮೀಕ್ಷೆಯ ದತ್ತಾಂಶದೊಂದಿಗೆ ತಾಳೆ ಹೊಂದದೇ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಮೇ 31 ಕೊನೆಯ ದಿನ. ಈ ಕುರಿತು ಸಂಬಂಧಿಸಿದ ರೈತರಿಗೆ ಈಗಾಗಲೇ ಮೊಬೈಲ್ ಸಂದೇಶವನ್ನು ಕಳುಹಿಸಲಾಗಿರುತ್ತದೆ. 2023-24 ನೇ ಸಾಲಿನಲ್ಲಿ ಯೋಜನೆಯಡಿ ನೋಂದಾವಣೆಗೊಂಡ ಯಾವುದೇ ರೈತರು ಈ ರೀತಿಯ ಸಂದೇಶವನ್ನು ಸ್ವೀಕರಿಸಿದಲ್ಲಿ, ಬೆಳೆ ಸಾಲ ಹೊಂದಿರುವ ರೈತರು ತಾವು ನೋಂದಾವಣೆಗೊಂಡ ಬ್ಯಾಂಕ್ ಶಾಖೆಯನ್ನು ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ತಾಲೂಕು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…