ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ ಬೆಳೆಯು ಆಯಾ ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ದಾಖಲಾಗಿರಬೇಕಿರುತ್ತದೆ. ಈ ಯೋಜನೆಯಡಿ ನೋಂದಾವಣೆಗೊಂಡ ಫಲಾನುಭವಿಗಳ ಸರ್ವೆ ನಂಬರ್ ಗಳಲ್ಲಿನ ಬೆಳೆಯ ಮಾಹಿತಿಯು ಬೆಳೆ ಸಮೀಕ್ಷೆಯ ದತ್ತಾಂಶದೊಂದಿಗೆ ತಾಳೆ ಹೊಂದದೇ ಇರುವ ಸಂದರ್ಭದಲ್ಲಿ ಬೆಳೆ ವಿಮೆ ಪರಿಹಾರ ಮೊತ್ತವನ್ನು ಪಾವತಿಸುವ ಮುನ್ನ ಬೆಳೆ ಸಮೀಕ್ಷೆ ಕೈಗೊಂಡು ತದನಂತರ ಪ್ರಕರಣವನ್ನು ಇತ್ಯರ್ಥಪಡಿಸಲಾಗುತ್ತದೆ.
2023-24 ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡು ಬೆಳೆ ಸಮೀಕ್ಷೆಯ ದತ್ತಾಂಶದೊಂದಿಗೆ ತಾಳೆ ಹೊಂದದೇ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಮೇ 31 ಕೊನೆಯ ದಿನ. ಈ ಕುರಿತು ಸಂಬಂಧಿಸಿದ ರೈತರಿಗೆ ಈಗಾಗಲೇ ಮೊಬೈಲ್ ಸಂದೇಶವನ್ನು ಕಳುಹಿಸಲಾಗಿರುತ್ತದೆ. 2023-24 ನೇ ಸಾಲಿನಲ್ಲಿ ಯೋಜನೆಯಡಿ ನೋಂದಾವಣೆಗೊಂಡ ಯಾವುದೇ ರೈತರು ಈ ರೀತಿಯ ಸಂದೇಶವನ್ನು ಸ್ವೀಕರಿಸಿದಲ್ಲಿ, ಬೆಳೆ ಸಾಲ ಹೊಂದಿರುವ ರೈತರು ತಾವು ನೋಂದಾವಣೆಗೊಂಡ ಬ್ಯಾಂಕ್ ಶಾಖೆಯನ್ನು ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ತಾಲೂಕು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…