Advertisement
MIRROR FOCUS

ಬೆಳೆ ವಿಮೆ – ಪರದಾಟಕ್ಕೆ ಸಿಗದ ಮುಕ್ತಿ | ಸರಳ ಪ್ರಕ್ರಿಯೆಗೆ ಸರಕಾರ ಏಕೆ ಸಜ್ಜಾಗುತ್ತಿಲ್ಲ ? |

Share

ಒಂದೇ ಸಾಲಿನ ವಿವರ ಹೀಗಿದೆ, 

Advertisement
Advertisement
ಬೆಳೆ ವಿಮೆಯಲ್ಲಿ ರಾಜ್ಯ ಸರಕಾರ 3ನೇ ಆಪ್ಷನ್‌ ತಕ್ಷಣವೇ ಮಾಡಿಕೊಟ್ಟರೆ ಅನೇಕ ರೈತರಿಗೆ ಅನುಕೂಲವಾದೀತು. ಜೂ.30 ರ ಒಳಗಾಗಿ ಬೆಳೆ ವಿಮೆ ನೋಂದಣಿಯಾಗಬೇಕಿದೆ. ಹೀಗಾಗಿ ತಕ್ಷಣವೇ ಈ ಬಗ್ಗೆ ಜನಪ್ರತಿನಿಧಿಗಳು ಗಮನಹರಿಸಬೇಕಿದೆ.

 

ಬೆಳೆ ವಿಮೆ ಕಡ್ಡಾಯವಾಗುತ್ತಿದೆ. ಹಳ್ಳಿಯ ಕೃಷಿಕರೂ ಈಗ ಬೆಳೆ ವಿಮೆ ಮಾಡಿಸುತ್ತಿದ್ದಾರೆ. ಅದು ಅಗತ್ಯವಾಗಿತ್ತಿದೆ. ಇದೀಗ  ಜೂನ್‌ ಅಂತ್ಯದ ಒಳಗೆ ಎಲ್ಲಾ ಬೆಳೆ ವಿಮೆ ಮಾಡಿಸಬೇಕು. ಹೀಗಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ತುರ್ತು ಕೆಲಸದಲ್ಲಿವೆ. ಅದರ ಜೊತೆ ಜೊತೆಗೇ ನೆಟ್ವರ್ಕ್‌ ಸಮಸ್ಯೆ, ಸರ್ವರ್‌ ಸಮಸ್ಯೆ. ಹೀಗಿದ್ದರೂ ಇಂದಿನ ಆನ್‌ ಲೈನ್‌ ವ್ಯವಸ್ಥೆಯಲ್ಲಿ ಸರಳ ವ್ಯವಸ್ಥೆಗೆ ಏಕೆ ಸರಕಾರ ಮುಂದಾಗುತ್ತಿಲ್ಲ.?

ಬೆಳೆ ವಿಮೆಯ ದಾಖಲಾತಿ ಮಾಡುವ ವಿಧಾನದಲ್ಲಿ  ರಾಜ್ಯದ ವೆಬ್‌ ಪೋರ್ಟಲ್‌ ನ್ಯಾಶನಲ್‌ ಪೋರ್ಟಲ್‌ ಗೆ ಸೇರಿಲ್ಲ  , ಹೀಗಾಗಿ ಸದ್ಯ ಕರ್ನಾಟಕದ ರೈತರು ಪ್ರಾಥಮಿಕ ಸಹಕಾರಿ ಸಂಘಗಗಳು ಅಥವಾ ಸಿ ಎಸ್‌ ಸೆಂಟರ್‌ ಗಳಲ್ಲಿ  ಮಾತ್ರವೇ ಬೆಳೆ ವಿಮೆ ಮಾಡಿಸಬಹುದಾಗಿದೆ. ಇದೇ ವೆಬ್ಸೈಟ್‌ ನಲ್ಲಿ  ಸ್ವತ: ರೈತರೇ ಮನೆಯಿಂದ ಅಥವಾ ಸೈಬರ್‌ ಸೆಂಟರ್ ಗಳಿಂದ ಬೆಳೆ ವಿಮೆ ಮಾಡಿಸುವ ಅವಕಾಶ ಇದೆ. ಆದರೆ ಈ ಅವಕಾಶವನ್ನು  ಈಗ ಮಾಡಲಾಗಿಲ್ಲ. ಇದರಿಂದಾಗಿ ನೇರವಾಗಿ ರೈತರಿಗೆ ಬೆಳೆವಿಮೆ ಮಾಡಿಸಲು ಸಾಧ್ಯವಾಗುತ್ತಿಲ್ಲ. ಸಹಕಾರಿ ಸಂಘಗಳು ಪರದಾಟ ನಡೆಸುತ್ತಿವೆ, ಈ ಪರದಾಟ ತಪ್ಪಿಸಲು ಸರಕಾರ ಮನಸು ಮಾಡಬಹುದಾಗಿದೆ. ಸದ್ಯ ಕರ್ನಾಟಕ ಹಾಗೂ ಗುಜರಾತ್‌ ಮಾತ್ರವೇ ಈ ಅವಕಾಶದಿಂದ ವಂಚಿತವಾಗಿದೆ, ಉಳಿದ ಎಲ್ಲಾ ರಾಜ್ಯಗಳಲ್ಲಿ ನೇರವಾಗಿ ರೈತರೇ ಬೆಳೆವಿಮೆ ಪಾವತಿ ಮಾಡುವ ಅವಕಾಶ ಕೊಡಲಾಗಿದೆ.

ಈಗ ಸಹಕಾರಿ ಸಂಘಗಳಿಂದ ಡಿಸಿಸಿ ಬ್ಯಾಂಕ್‌ ಮೂಲಕ ರಾಜ್ಯಕ್ಕೆ  ಲಭ್ಯವಾಗಿ ನಂತರ ಕೇಂದ್ರದ ಪೋರ್ಟಲ್‌ ಗೆ ಬೆಳೆವಿಮೆ ದಾಖಲಾಗುತ್ತದೆ. ಒಂದು ವೇಳೆ ರೈತರಿಗೇ ಅವಕಾಶ ನೀಡಿದರೆ ನೇರವಾಗಿ ಕೇಂದ್ರದ ಪೋರ್ಟಲ್‌ ಗೆ ಬೆಳೆವಿಮೆ ಪಾವತಿ ಮಾಡಲು ಸಾಧ್ಯವಾಗುತ್ತದೆ. ಆಗ ಬಹುಪಾಲು ಗೊಂದಲ ನಿವಾರಣೆಯಾಗಲು ಸಾಧ್ಯವಿದೆ, ಜೂನ್.‌30  ರ ಗೊಂದಲವೂ ದೂರವಾಗಲಿದೆ. ಈ ಬಗ್ಗೆ ತಕ್ಷಣವೇ ಗಮನಹರಿಸಬೇಕಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

3 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago