MIRROR FOCUS

ಬೆಳೆ ವಿಮೆ – ಪರದಾಟಕ್ಕೆ ಸಿಗದ ಮುಕ್ತಿ | ಸರಳ ಪ್ರಕ್ರಿಯೆಗೆ ಸರಕಾರ ಏಕೆ ಸಜ್ಜಾಗುತ್ತಿಲ್ಲ ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒಂದೇ ಸಾಲಿನ ವಿವರ ಹೀಗಿದೆ, 

Advertisement
ಬೆಳೆ ವಿಮೆಯಲ್ಲಿ ರಾಜ್ಯ ಸರಕಾರ 3ನೇ ಆಪ್ಷನ್‌ ತಕ್ಷಣವೇ ಮಾಡಿಕೊಟ್ಟರೆ ಅನೇಕ ರೈತರಿಗೆ ಅನುಕೂಲವಾದೀತು. ಜೂ.30 ರ ಒಳಗಾಗಿ ಬೆಳೆ ವಿಮೆ ನೋಂದಣಿಯಾಗಬೇಕಿದೆ. ಹೀಗಾಗಿ ತಕ್ಷಣವೇ ಈ ಬಗ್ಗೆ ಜನಪ್ರತಿನಿಧಿಗಳು ಗಮನಹರಿಸಬೇಕಿದೆ.

 

ಬೆಳೆ ವಿಮೆ ಕಡ್ಡಾಯವಾಗುತ್ತಿದೆ. ಹಳ್ಳಿಯ ಕೃಷಿಕರೂ ಈಗ ಬೆಳೆ ವಿಮೆ ಮಾಡಿಸುತ್ತಿದ್ದಾರೆ. ಅದು ಅಗತ್ಯವಾಗಿತ್ತಿದೆ. ಇದೀಗ  ಜೂನ್‌ ಅಂತ್ಯದ ಒಳಗೆ ಎಲ್ಲಾ ಬೆಳೆ ವಿಮೆ ಮಾಡಿಸಬೇಕು. ಹೀಗಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ತುರ್ತು ಕೆಲಸದಲ್ಲಿವೆ. ಅದರ ಜೊತೆ ಜೊತೆಗೇ ನೆಟ್ವರ್ಕ್‌ ಸಮಸ್ಯೆ, ಸರ್ವರ್‌ ಸಮಸ್ಯೆ. ಹೀಗಿದ್ದರೂ ಇಂದಿನ ಆನ್‌ ಲೈನ್‌ ವ್ಯವಸ್ಥೆಯಲ್ಲಿ ಸರಳ ವ್ಯವಸ್ಥೆಗೆ ಏಕೆ ಸರಕಾರ ಮುಂದಾಗುತ್ತಿಲ್ಲ.?

ಬೆಳೆ ವಿಮೆಯ ದಾಖಲಾತಿ ಮಾಡುವ ವಿಧಾನದಲ್ಲಿ  ರಾಜ್ಯದ ವೆಬ್‌ ಪೋರ್ಟಲ್‌ ನ್ಯಾಶನಲ್‌ ಪೋರ್ಟಲ್‌ ಗೆ ಸೇರಿಲ್ಲ  , ಹೀಗಾಗಿ ಸದ್ಯ ಕರ್ನಾಟಕದ ರೈತರು ಪ್ರಾಥಮಿಕ ಸಹಕಾರಿ ಸಂಘಗಗಳು ಅಥವಾ ಸಿ ಎಸ್‌ ಸೆಂಟರ್‌ ಗಳಲ್ಲಿ  ಮಾತ್ರವೇ ಬೆಳೆ ವಿಮೆ ಮಾಡಿಸಬಹುದಾಗಿದೆ. ಇದೇ ವೆಬ್ಸೈಟ್‌ ನಲ್ಲಿ  ಸ್ವತ: ರೈತರೇ ಮನೆಯಿಂದ ಅಥವಾ ಸೈಬರ್‌ ಸೆಂಟರ್ ಗಳಿಂದ ಬೆಳೆ ವಿಮೆ ಮಾಡಿಸುವ ಅವಕಾಶ ಇದೆ. ಆದರೆ ಈ ಅವಕಾಶವನ್ನು  ಈಗ ಮಾಡಲಾಗಿಲ್ಲ. ಇದರಿಂದಾಗಿ ನೇರವಾಗಿ ರೈತರಿಗೆ ಬೆಳೆವಿಮೆ ಮಾಡಿಸಲು ಸಾಧ್ಯವಾಗುತ್ತಿಲ್ಲ. ಸಹಕಾರಿ ಸಂಘಗಳು ಪರದಾಟ ನಡೆಸುತ್ತಿವೆ, ಈ ಪರದಾಟ ತಪ್ಪಿಸಲು ಸರಕಾರ ಮನಸು ಮಾಡಬಹುದಾಗಿದೆ. ಸದ್ಯ ಕರ್ನಾಟಕ ಹಾಗೂ ಗುಜರಾತ್‌ ಮಾತ್ರವೇ ಈ ಅವಕಾಶದಿಂದ ವಂಚಿತವಾಗಿದೆ, ಉಳಿದ ಎಲ್ಲಾ ರಾಜ್ಯಗಳಲ್ಲಿ ನೇರವಾಗಿ ರೈತರೇ ಬೆಳೆವಿಮೆ ಪಾವತಿ ಮಾಡುವ ಅವಕಾಶ ಕೊಡಲಾಗಿದೆ.

Advertisement

ಈಗ ಸಹಕಾರಿ ಸಂಘಗಳಿಂದ ಡಿಸಿಸಿ ಬ್ಯಾಂಕ್‌ ಮೂಲಕ ರಾಜ್ಯಕ್ಕೆ  ಲಭ್ಯವಾಗಿ ನಂತರ ಕೇಂದ್ರದ ಪೋರ್ಟಲ್‌ ಗೆ ಬೆಳೆವಿಮೆ ದಾಖಲಾಗುತ್ತದೆ. ಒಂದು ವೇಳೆ ರೈತರಿಗೇ ಅವಕಾಶ ನೀಡಿದರೆ ನೇರವಾಗಿ ಕೇಂದ್ರದ ಪೋರ್ಟಲ್‌ ಗೆ ಬೆಳೆವಿಮೆ ಪಾವತಿ ಮಾಡಲು ಸಾಧ್ಯವಾಗುತ್ತದೆ. ಆಗ ಬಹುಪಾಲು ಗೊಂದಲ ನಿವಾರಣೆಯಾಗಲು ಸಾಧ್ಯವಿದೆ, ಜೂನ್.‌30  ರ ಗೊಂದಲವೂ ದೂರವಾಗಲಿದೆ. ಈ ಬಗ್ಗೆ ತಕ್ಷಣವೇ ಗಮನಹರಿಸಬೇಕಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ನಿರಂತರತೆಗೆ ಇರುವ ಶಕ್ತಿ ಅಪಾರ: ರಾಘವೇಶ್ವರ ಶ್ರೀ

ನೀರು ಕಲ್ಲಿಗಿಂತ ಮೆದುವಾದರೂ, ನಿರಂತರತೆಯಿಂದ ಕಲ್ಲನ್ನೂ ಕೊರೆಯಬಲ್ಲದು. ನಿರಂತರತೆಗೆ ಇರುವ ಶಕ್ತಿ ಅಪಾರ.…

8 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಸುಚನ್ಯ

ಸುಚನ್ಯ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ , | ಕ್ರಿಯೇಟಿವ್‌…

8 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪೃಥ್ವಿ ಜಿ ಎಂ

ಪೃಥ್ವಿ ಜಿ ಎಂ, 6 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಸುಬ್ರಹ್ಮಣ್ಯ |…

9 hours ago

ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು- ಪ್ರವಾಸಿಗರು ನದಿಗೆ ಇಳಿಯದಂತೆ ಸೂಚನೆ

ಶರಾವತಿ ಜಲವಿದ್ಯುತ್ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗನಮಕ್ಕಿ…

9 hours ago

ಕೃಷಿ ವಲಯದ ಅಭಿವೃದ್ಧಿಗೆ ಆದ್ಯತೆ – ಪಿಎಂ ಧನ-ಧಾನ್ಯ ಕೃಷಿ ಯೋಜನೆ ಜಾರಿಗೆ ಸಮ್ಮತಿ

ಕೇಂದ್ರ ಸರ್ಕಾರ ಕೃಷಿ ವಲಯದ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕನಿಷ್ಟ…

9 hours ago

ಹವಾಮಾನ ವರದಿ | 18-07-2025 | ಸಾಮಾನ್ಯ ಮಳೆ ಮುಂದುವರಿಕೆ | ಮುಂದಿನ 10 ದಿನಗಳಲ್ಲಿ ಎಲ್ಲೆಲ್ಲೆ ಮಳೆ..?

19.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

14 hours ago