ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದೆ. ಭತ್ತ, ಜೋಳ ಸೇರಿದಂತೆ ತರಕಾರಿ ಕೃಷಿಗೂ ಹಾನಿಯಾಗಿದೆ.
ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಎಡಬಿಡದೆ ಬೀಳುತ್ತಿರುವ ಮಳೆಯಿಂದ ಬದ್ಧಿಪಲ್ಲಿ, ಪೆದ್ದೂರು ಗ್ರಾಮಗಳಲ್ಲಿ ರೈತರ ಬೆಳೆ ಹಾನಿ ಆಗಿದ್ದು, ಸತತ ಮಳೆಯಿಂದ ಕಟಾವಿಗೆ ಬಂದಿರುವ ಭತ್ತ, ಟೊಮೊಟೋ ಹಾಗು ಇತರೆ ಬೆಳೆಗಳು ನೀರು ಪಾಲಾಗಿದೆ. ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ಟೊಮೊಟೊ ರೈತರು ಕಂಗಾಲಾಗಿದ್ದು, ಪ್ರಸ್ತುತ 15 ಕೆ.ಜಿ ಬಾಕ್ಸ್ ಟೊಮೊಟೊ 600 ರಿಂದ 800 ರೂಪಾಯಿ ಮಾರಾಟವಾಗುತ್ತಿದೆ. ಆದರೆ ಮಳೆಯಿಂದ ಟೊಮೊಟೋ ನೆಲಕ್ಕೆ ಉದುರುತ್ತಿವೆ. ಅಲ್ಲದೆ ತೋಟಕ್ಕೆ ಕಪ್ಪು ಮಚ್ಚೆ ಹಾಗೂ ಗಜ್ಜಿ ರೋಗ ಹರಡುವ ಆತಂಕ ರೈತರಲ್ಲಿ ಮನೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿಗೆ ಸಮಸ್ಯೆ ಎದುರಾಗಿದೆ. ತೋಟಗಾರಿಕೆ ಬೆಳೆಗಳಾದ ಟೊಮೊಟೋ, ತರಕಾರಿ ಬೆಳೆಗಳು, ಹೂವಿನ ತೋಟಗಳಲ್ಲಿ ನೀರು ನಿಂತಿದ್ದು, ಇದರಿಂದ ಫಸಲು ನಾಶವಾಗಿ ರೈತರು ಕಂಗಾಲಾಗಿದ್ದಾರೆ.
ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಬೇಳೆ-ಕಾಳುಗಳು, ಆಹಾರ ಧಾನ್ಯಗಳು, ಎಣ್ಣೆ ಕಾಳುಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂ-ಹಣ್ಣು ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿಯಾಗಿವೆ. ಕೂಡಲೇ ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ವಿತರಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…