ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದೆ. ಭತ್ತ, ಜೋಳ ಸೇರಿದಂತೆ ತರಕಾರಿ ಕೃಷಿಗೂ ಹಾನಿಯಾಗಿದೆ.
ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಎಡಬಿಡದೆ ಬೀಳುತ್ತಿರುವ ಮಳೆಯಿಂದ ಬದ್ಧಿಪಲ್ಲಿ, ಪೆದ್ದೂರು ಗ್ರಾಮಗಳಲ್ಲಿ ರೈತರ ಬೆಳೆ ಹಾನಿ ಆಗಿದ್ದು, ಸತತ ಮಳೆಯಿಂದ ಕಟಾವಿಗೆ ಬಂದಿರುವ ಭತ್ತ, ಟೊಮೊಟೋ ಹಾಗು ಇತರೆ ಬೆಳೆಗಳು ನೀರು ಪಾಲಾಗಿದೆ. ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ಟೊಮೊಟೊ ರೈತರು ಕಂಗಾಲಾಗಿದ್ದು, ಪ್ರಸ್ತುತ 15 ಕೆ.ಜಿ ಬಾಕ್ಸ್ ಟೊಮೊಟೊ 600 ರಿಂದ 800 ರೂಪಾಯಿ ಮಾರಾಟವಾಗುತ್ತಿದೆ. ಆದರೆ ಮಳೆಯಿಂದ ಟೊಮೊಟೋ ನೆಲಕ್ಕೆ ಉದುರುತ್ತಿವೆ. ಅಲ್ಲದೆ ತೋಟಕ್ಕೆ ಕಪ್ಪು ಮಚ್ಚೆ ಹಾಗೂ ಗಜ್ಜಿ ರೋಗ ಹರಡುವ ಆತಂಕ ರೈತರಲ್ಲಿ ಮನೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿಗೆ ಸಮಸ್ಯೆ ಎದುರಾಗಿದೆ. ತೋಟಗಾರಿಕೆ ಬೆಳೆಗಳಾದ ಟೊಮೊಟೋ, ತರಕಾರಿ ಬೆಳೆಗಳು, ಹೂವಿನ ತೋಟಗಳಲ್ಲಿ ನೀರು ನಿಂತಿದ್ದು, ಇದರಿಂದ ಫಸಲು ನಾಶವಾಗಿ ರೈತರು ಕಂಗಾಲಾಗಿದ್ದಾರೆ.
ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಬೇಳೆ-ಕಾಳುಗಳು, ಆಹಾರ ಧಾನ್ಯಗಳು, ಎಣ್ಣೆ ಕಾಳುಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂ-ಹಣ್ಣು ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿಯಾಗಿವೆ. ಕೂಡಲೇ ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ವಿತರಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…