ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದೆ. ಭತ್ತ, ಜೋಳ ಸೇರಿದಂತೆ ತರಕಾರಿ ಕೃಷಿಗೂ ಹಾನಿಯಾಗಿದೆ.
ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಎಡಬಿಡದೆ ಬೀಳುತ್ತಿರುವ ಮಳೆಯಿಂದ ಬದ್ಧಿಪಲ್ಲಿ, ಪೆದ್ದೂರು ಗ್ರಾಮಗಳಲ್ಲಿ ರೈತರ ಬೆಳೆ ಹಾನಿ ಆಗಿದ್ದು, ಸತತ ಮಳೆಯಿಂದ ಕಟಾವಿಗೆ ಬಂದಿರುವ ಭತ್ತ, ಟೊಮೊಟೋ ಹಾಗು ಇತರೆ ಬೆಳೆಗಳು ನೀರು ಪಾಲಾಗಿದೆ. ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ಟೊಮೊಟೊ ರೈತರು ಕಂಗಾಲಾಗಿದ್ದು, ಪ್ರಸ್ತುತ 15 ಕೆ.ಜಿ ಬಾಕ್ಸ್ ಟೊಮೊಟೊ 600 ರಿಂದ 800 ರೂಪಾಯಿ ಮಾರಾಟವಾಗುತ್ತಿದೆ. ಆದರೆ ಮಳೆಯಿಂದ ಟೊಮೊಟೋ ನೆಲಕ್ಕೆ ಉದುರುತ್ತಿವೆ. ಅಲ್ಲದೆ ತೋಟಕ್ಕೆ ಕಪ್ಪು ಮಚ್ಚೆ ಹಾಗೂ ಗಜ್ಜಿ ರೋಗ ಹರಡುವ ಆತಂಕ ರೈತರಲ್ಲಿ ಮನೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿಗೆ ಸಮಸ್ಯೆ ಎದುರಾಗಿದೆ. ತೋಟಗಾರಿಕೆ ಬೆಳೆಗಳಾದ ಟೊಮೊಟೋ, ತರಕಾರಿ ಬೆಳೆಗಳು, ಹೂವಿನ ತೋಟಗಳಲ್ಲಿ ನೀರು ನಿಂತಿದ್ದು, ಇದರಿಂದ ಫಸಲು ನಾಶವಾಗಿ ರೈತರು ಕಂಗಾಲಾಗಿದ್ದಾರೆ.
ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಬೇಳೆ-ಕಾಳುಗಳು, ಆಹಾರ ಧಾನ್ಯಗಳು, ಎಣ್ಣೆ ಕಾಳುಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂ-ಹಣ್ಣು ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿಯಾಗಿವೆ. ಕೂಡಲೇ ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ವಿತರಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…