ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದೆ. ಭತ್ತ, ಜೋಳ ಸೇರಿದಂತೆ ತರಕಾರಿ ಕೃಷಿಗೂ ಹಾನಿಯಾಗಿದೆ.
ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಎಡಬಿಡದೆ ಬೀಳುತ್ತಿರುವ ಮಳೆಯಿಂದ ಬದ್ಧಿಪಲ್ಲಿ, ಪೆದ್ದೂರು ಗ್ರಾಮಗಳಲ್ಲಿ ರೈತರ ಬೆಳೆ ಹಾನಿ ಆಗಿದ್ದು, ಸತತ ಮಳೆಯಿಂದ ಕಟಾವಿಗೆ ಬಂದಿರುವ ಭತ್ತ, ಟೊಮೊಟೋ ಹಾಗು ಇತರೆ ಬೆಳೆಗಳು ನೀರು ಪಾಲಾಗಿದೆ. ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ಟೊಮೊಟೊ ರೈತರು ಕಂಗಾಲಾಗಿದ್ದು, ಪ್ರಸ್ತುತ 15 ಕೆ.ಜಿ ಬಾಕ್ಸ್ ಟೊಮೊಟೊ 600 ರಿಂದ 800 ರೂಪಾಯಿ ಮಾರಾಟವಾಗುತ್ತಿದೆ. ಆದರೆ ಮಳೆಯಿಂದ ಟೊಮೊಟೋ ನೆಲಕ್ಕೆ ಉದುರುತ್ತಿವೆ. ಅಲ್ಲದೆ ತೋಟಕ್ಕೆ ಕಪ್ಪು ಮಚ್ಚೆ ಹಾಗೂ ಗಜ್ಜಿ ರೋಗ ಹರಡುವ ಆತಂಕ ರೈತರಲ್ಲಿ ಮನೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿಗೆ ಸಮಸ್ಯೆ ಎದುರಾಗಿದೆ. ತೋಟಗಾರಿಕೆ ಬೆಳೆಗಳಾದ ಟೊಮೊಟೋ, ತರಕಾರಿ ಬೆಳೆಗಳು, ಹೂವಿನ ತೋಟಗಳಲ್ಲಿ ನೀರು ನಿಂತಿದ್ದು, ಇದರಿಂದ ಫಸಲು ನಾಶವಾಗಿ ರೈತರು ಕಂಗಾಲಾಗಿದ್ದಾರೆ.
ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಬೇಳೆ-ಕಾಳುಗಳು, ಆಹಾರ ಧಾನ್ಯಗಳು, ಎಣ್ಣೆ ಕಾಳುಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂ-ಹಣ್ಣು ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿಯಾಗಿವೆ. ಕೂಡಲೇ ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ವಿತರಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…