ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದೆ. ಭತ್ತ, ಜೋಳ ಸೇರಿದಂತೆ ತರಕಾರಿ ಕೃಷಿಗೂ ಹಾನಿಯಾಗಿದೆ.
ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಎಡಬಿಡದೆ ಬೀಳುತ್ತಿರುವ ಮಳೆಯಿಂದ ಬದ್ಧಿಪಲ್ಲಿ, ಪೆದ್ದೂರು ಗ್ರಾಮಗಳಲ್ಲಿ ರೈತರ ಬೆಳೆ ಹಾನಿ ಆಗಿದ್ದು, ಸತತ ಮಳೆಯಿಂದ ಕಟಾವಿಗೆ ಬಂದಿರುವ ಭತ್ತ, ಟೊಮೊಟೋ ಹಾಗು ಇತರೆ ಬೆಳೆಗಳು ನೀರು ಪಾಲಾಗಿದೆ. ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ಟೊಮೊಟೊ ರೈತರು ಕಂಗಾಲಾಗಿದ್ದು, ಪ್ರಸ್ತುತ 15 ಕೆ.ಜಿ ಬಾಕ್ಸ್ ಟೊಮೊಟೊ 600 ರಿಂದ 800 ರೂಪಾಯಿ ಮಾರಾಟವಾಗುತ್ತಿದೆ. ಆದರೆ ಮಳೆಯಿಂದ ಟೊಮೊಟೋ ನೆಲಕ್ಕೆ ಉದುರುತ್ತಿವೆ. ಅಲ್ಲದೆ ತೋಟಕ್ಕೆ ಕಪ್ಪು ಮಚ್ಚೆ ಹಾಗೂ ಗಜ್ಜಿ ರೋಗ ಹರಡುವ ಆತಂಕ ರೈತರಲ್ಲಿ ಮನೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿಗೆ ಸಮಸ್ಯೆ ಎದುರಾಗಿದೆ. ತೋಟಗಾರಿಕೆ ಬೆಳೆಗಳಾದ ಟೊಮೊಟೋ, ತರಕಾರಿ ಬೆಳೆಗಳು, ಹೂವಿನ ತೋಟಗಳಲ್ಲಿ ನೀರು ನಿಂತಿದ್ದು, ಇದರಿಂದ ಫಸಲು ನಾಶವಾಗಿ ರೈತರು ಕಂಗಾಲಾಗಿದ್ದಾರೆ.
ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಬೇಳೆ-ಕಾಳುಗಳು, ಆಹಾರ ಧಾನ್ಯಗಳು, ಎಣ್ಣೆ ಕಾಳುಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂ-ಹಣ್ಣು ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿಯಾಗಿವೆ. ಕೂಡಲೇ ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ವಿತರಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…