ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದೆ. ಭತ್ತ, ಜೋಳ ಸೇರಿದಂತೆ ತರಕಾರಿ ಕೃಷಿಗೂ ಹಾನಿಯಾಗಿದೆ.
ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಎಡಬಿಡದೆ ಬೀಳುತ್ತಿರುವ ಮಳೆಯಿಂದ ಬದ್ಧಿಪಲ್ಲಿ, ಪೆದ್ದೂರು ಗ್ರಾಮಗಳಲ್ಲಿ ರೈತರ ಬೆಳೆ ಹಾನಿ ಆಗಿದ್ದು, ಸತತ ಮಳೆಯಿಂದ ಕಟಾವಿಗೆ ಬಂದಿರುವ ಭತ್ತ, ಟೊಮೊಟೋ ಹಾಗು ಇತರೆ ಬೆಳೆಗಳು ನೀರು ಪಾಲಾಗಿದೆ. ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ಟೊಮೊಟೊ ರೈತರು ಕಂಗಾಲಾಗಿದ್ದು, ಪ್ರಸ್ತುತ 15 ಕೆ.ಜಿ ಬಾಕ್ಸ್ ಟೊಮೊಟೊ 600 ರಿಂದ 800 ರೂಪಾಯಿ ಮಾರಾಟವಾಗುತ್ತಿದೆ. ಆದರೆ ಮಳೆಯಿಂದ ಟೊಮೊಟೋ ನೆಲಕ್ಕೆ ಉದುರುತ್ತಿವೆ. ಅಲ್ಲದೆ ತೋಟಕ್ಕೆ ಕಪ್ಪು ಮಚ್ಚೆ ಹಾಗೂ ಗಜ್ಜಿ ರೋಗ ಹರಡುವ ಆತಂಕ ರೈತರಲ್ಲಿ ಮನೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿಗೆ ಸಮಸ್ಯೆ ಎದುರಾಗಿದೆ. ತೋಟಗಾರಿಕೆ ಬೆಳೆಗಳಾದ ಟೊಮೊಟೋ, ತರಕಾರಿ ಬೆಳೆಗಳು, ಹೂವಿನ ತೋಟಗಳಲ್ಲಿ ನೀರು ನಿಂತಿದ್ದು, ಇದರಿಂದ ಫಸಲು ನಾಶವಾಗಿ ರೈತರು ಕಂಗಾಲಾಗಿದ್ದಾರೆ.
ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಬೇಳೆ-ಕಾಳುಗಳು, ಆಹಾರ ಧಾನ್ಯಗಳು, ಎಣ್ಣೆ ಕಾಳುಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂ-ಹಣ್ಣು ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿಯಾಗಿವೆ. ಕೂಡಲೇ ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ವಿತರಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…
ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…