ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದೆ. ಭತ್ತ, ಜೋಳ ಸೇರಿದಂತೆ ತರಕಾರಿ ಕೃಷಿಗೂ ಹಾನಿಯಾಗಿದೆ.
ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಎಡಬಿಡದೆ ಬೀಳುತ್ತಿರುವ ಮಳೆಯಿಂದ ಬದ್ಧಿಪಲ್ಲಿ, ಪೆದ್ದೂರು ಗ್ರಾಮಗಳಲ್ಲಿ ರೈತರ ಬೆಳೆ ಹಾನಿ ಆಗಿದ್ದು, ಸತತ ಮಳೆಯಿಂದ ಕಟಾವಿಗೆ ಬಂದಿರುವ ಭತ್ತ, ಟೊಮೊಟೋ ಹಾಗು ಇತರೆ ಬೆಳೆಗಳು ನೀರು ಪಾಲಾಗಿದೆ. ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ಟೊಮೊಟೊ ರೈತರು ಕಂಗಾಲಾಗಿದ್ದು, ಪ್ರಸ್ತುತ 15 ಕೆ.ಜಿ ಬಾಕ್ಸ್ ಟೊಮೊಟೊ 600 ರಿಂದ 800 ರೂಪಾಯಿ ಮಾರಾಟವಾಗುತ್ತಿದೆ. ಆದರೆ ಮಳೆಯಿಂದ ಟೊಮೊಟೋ ನೆಲಕ್ಕೆ ಉದುರುತ್ತಿವೆ. ಅಲ್ಲದೆ ತೋಟಕ್ಕೆ ಕಪ್ಪು ಮಚ್ಚೆ ಹಾಗೂ ಗಜ್ಜಿ ರೋಗ ಹರಡುವ ಆತಂಕ ರೈತರಲ್ಲಿ ಮನೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿಗೆ ಸಮಸ್ಯೆ ಎದುರಾಗಿದೆ. ತೋಟಗಾರಿಕೆ ಬೆಳೆಗಳಾದ ಟೊಮೊಟೋ, ತರಕಾರಿ ಬೆಳೆಗಳು, ಹೂವಿನ ತೋಟಗಳಲ್ಲಿ ನೀರು ನಿಂತಿದ್ದು, ಇದರಿಂದ ಫಸಲು ನಾಶವಾಗಿ ರೈತರು ಕಂಗಾಲಾಗಿದ್ದಾರೆ.
ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಬೇಳೆ-ಕಾಳುಗಳು, ಆಹಾರ ಧಾನ್ಯಗಳು, ಎಣ್ಣೆ ಕಾಳುಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂ-ಹಣ್ಣು ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿಯಾಗಿವೆ. ಕೂಡಲೇ ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ವಿತರಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…