ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟವಾಗಿದೆ. ಭತ್ತ, ಜೋಳ ಸೇರಿದಂತೆ ತರಕಾರಿ ಕೃಷಿಗೂ ಹಾನಿಯಾಗಿದೆ.
ಕೋಲಾರ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಎಡಬಿಡದೆ ಬೀಳುತ್ತಿರುವ ಮಳೆಯಿಂದ ಬದ್ಧಿಪಲ್ಲಿ, ಪೆದ್ದೂರು ಗ್ರಾಮಗಳಲ್ಲಿ ರೈತರ ಬೆಳೆ ಹಾನಿ ಆಗಿದ್ದು, ಸತತ ಮಳೆಯಿಂದ ಕಟಾವಿಗೆ ಬಂದಿರುವ ಭತ್ತ, ಟೊಮೊಟೋ ಹಾಗು ಇತರೆ ಬೆಳೆಗಳು ನೀರು ಪಾಲಾಗಿದೆ. ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ಟೊಮೊಟೊ ರೈತರು ಕಂಗಾಲಾಗಿದ್ದು, ಪ್ರಸ್ತುತ 15 ಕೆ.ಜಿ ಬಾಕ್ಸ್ ಟೊಮೊಟೊ 600 ರಿಂದ 800 ರೂಪಾಯಿ ಮಾರಾಟವಾಗುತ್ತಿದೆ. ಆದರೆ ಮಳೆಯಿಂದ ಟೊಮೊಟೋ ನೆಲಕ್ಕೆ ಉದುರುತ್ತಿವೆ. ಅಲ್ಲದೆ ತೋಟಕ್ಕೆ ಕಪ್ಪು ಮಚ್ಚೆ ಹಾಗೂ ಗಜ್ಜಿ ರೋಗ ಹರಡುವ ಆತಂಕ ರೈತರಲ್ಲಿ ಮನೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿಗೆ ಸಮಸ್ಯೆ ಎದುರಾಗಿದೆ. ತೋಟಗಾರಿಕೆ ಬೆಳೆಗಳಾದ ಟೊಮೊಟೋ, ತರಕಾರಿ ಬೆಳೆಗಳು, ಹೂವಿನ ತೋಟಗಳಲ್ಲಿ ನೀರು ನಿಂತಿದ್ದು, ಇದರಿಂದ ಫಸಲು ನಾಶವಾಗಿ ರೈತರು ಕಂಗಾಲಾಗಿದ್ದಾರೆ.
ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಬೇಳೆ-ಕಾಳುಗಳು, ಆಹಾರ ಧಾನ್ಯಗಳು, ಎಣ್ಣೆ ಕಾಳುಗಳು, ವಾಣಿಜ್ಯ ಬೆಳೆಗಳು, ತರಕಾರಿ, ಹೂ-ಹಣ್ಣು ಸೇರಿದಂತೆ ಅನೇಕ ಬೆಳೆಗಳಿಗೆ ಹಾನಿಯಾಗಿವೆ. ಕೂಡಲೇ ಸಮೀಕ್ಷೆ ನಡೆಸಿ, ರೈತರಿಗೆ ಪರಿಹಾರ ವಿತರಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…