ಸುದ್ದಿಗಳು

ಕಾಡು ಪ್ರಾಣಿಗಳ ಕಾಟಕ್ಕೆ ಬೇಸತ್ತ ರೈತರು | ಬೆಳೆಹಾನಿ ಪರಿಹಾರ ಮೊತ್ತ ಹೆಚ್ಚಳ | ಸರ್ಕಾರದಿಂದ ರೈತರಿಗೆ ಸಹಾಯಹಸ್ತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರೈತ ಬೆಳೆದ ಬೆಳೆಯ ಫಸಲು ಕೈಗೆ ಬರುವವರೆಗೆ ಅದೆಷ್ಟೋ ನಷ್ಟಗಳನ್ನು ಅನುಭವಿಸುತ್ತಾನೆ. ಮಳೆ ಜಾಸ್ತಿಯಾದರೆ ಕೊಚ್ಚಿ ಕೊಂಡು ಹೋಗುತ್ತೆ, ಮಳೆ ಬಂದಿಲ್ಲಾಂದ್ರೆ ಬೆಳೆ ಒಣಗಿ ಹೋಗುತ್ತೆ. ಇದಲ್ಲದೆ ಕಾಡಂಚಿನ ಕೃಷಿ ಭೂಮಿಗೆ ಪ್ರಾಣಿಗಳ ಕಾಟ.. ಅದರಲ್ಲೂ ಆನೆ, ಕಾಡುಕೋಣ, ಹಂದಿ, ನವಿಲು, ಜಿಂಕೆ ಹೀಗೆ ಒಂದಾ ಎರಡಾ..? ತಮಗೆ ಬೇಕಾದ್ದನ್ನು ತಿಂದು ಬೆಳೆ ಹಾನಿ ಮಾಡಿ ಹೋಗುತ್ತವೆ. ಇದರ ಮುಂದೆ ರೈತ, ಏನು ಮಾಡಲಾಗದೆ ಕೈಕಟ್ಟಿ ಕೂರುವ ಪರಿಸ್ಥಿತಿ.

Advertisement

ಕೆಲವೊಂದು ಸಮಸ್ಯೆಗಳಿಗೆ ಸರ್ಕಾರ ಬೆಳೆವಿಮೆ ನೀಡುತಿತ್ತು. ಆದರೆ ಅದು ಅರೆ ಕಾಸಿನ ಮಜ್ಜಿಗೆ. ಇದೀಗ ರೈತರಿಗೆ ನಷ್ಟ ಆಗದ ರೀತಿಯಲ್ಲಿ ಬೆಳೆಗಳಿಗೆ ಬೆಳೆವಿಮೆ ನೀಡಲು ನಿರ್ಧರರಿಸಿದೆ. ಕಾಡು ಪ್ರಾಣಿಗಳ ಕಾಟದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೂ ಪರಿಹಾರ ನೀಡಲು ಸರ್ಕಾರ ಮುಂದೆ ಬಂದಿದೆ.

ಕಾಡು ಪ್ರಾಣಿಗಳು ಬೆಳೆ ನಾಶ ಮಾಡಿದರೆ ಸರ್ಕಾರ ನೀಡುತ್ತೆ ಪರಿಹಾರ :

ಕಾಡು ಪ್ರಾಣಿಗಳಿಂದ ಉಂಟಾದ ಬೆಳೆ ಹಾನಿಗೆ ನೀಡುವ ಪರಿಹಾರದ ಗರಿಷ್ಠ ಮೊತ್ತವನ್ನು 50 ಸಾವಿರ ರೂಗಳಿಂದ 1 ಲಕ್ಷಕ್ಕೆ ಏರಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ರೈತರ ಬಹುಕಾಲದ ಬೇಡಿಕೆಗೆ ಮನ್ನಣೆ ಸಿಕ್ಕಾಂತಾಗಿದೆ. ವನ್ಯ ಜೀವಿಗಳಿಂದ ಉಂಟಾಗೋ ಜಾನುವಾರುಗಳ ಪ್ರಾಣ ಹಾನಿ  ಮತ್ತು ಬೆಳೆ ಹಾನಿಗೆ ಪರಿಹಾರ ಹೆಚ್ಚಿಸುವ  ಮೂಲಕ ಸರ್ಕಾರ ಮತ್ತು ಅರಣ್ಯ ಇಲಾಖೆ ಗ್ರಾಮೀಣ ಜನರಿಗೆ ನೆರವಾಗಿದೆ.

Advertisement

ಅಡಿಕೆ ತೆಂಗು, ಮಾವು, ಭತ್ತ, ರಾಗಿ, ನೆಲಗಡಲೆ, ಟೊಮ್ಯಾಟೋ, ಹಿಪ್ಪು ನೇರಳೆ ಬೆಳೆಗಳ ಪರಿಹಾರ ಮೊತ್ತವನ್ನು ಎರಡು ಪಟ್ಟು ಹೆಚ್ಚಿಸಲಾಗಿದೆ. ಅದೇ ರೀತಿ ಅಧಿಕಾರಿಗಳ ಸರ್ವೆ ಮುಖಾಂತರ ಸರ್ಕಾರದ ಗಮನಕ್ಕೆ ತಂದು ರೈತರಿಗೆ ನಷ್ಟದ ಪರಿಹಾರ ನೀಡಲು ಮುಂದಾಗಿದೆ. ವನ್ಯ ಜೀವಿಗಳ ಕಾಟದಿಂದ ಬೇಸತ್ತಿದ್ದ ರೈತರಿಗೆ ಸರ್ಕಾರದ ಈ ಯೋಜನೆ ತುಸು ನಿಟ್ಟುಸಿರು ಬಿಡುವಂತೆ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ

ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಪೂರೈಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ…

8 hours ago

ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ

ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ…

8 hours ago

ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ

ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ,…

8 hours ago

ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು…

8 hours ago

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ…

9 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ | ಮಳೆಗೆ ಎಲ್ಲೆಲ್ಲಿ ಏನೇನಾಯ್ತು…? |

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 30…

9 hours ago