Advertisement
ಸುದ್ದಿಗಳು

ಕಾಡು ಪ್ರಾಣಿಗಳ ಕಾಟಕ್ಕೆ ಬೇಸತ್ತ ರೈತರು | ಬೆಳೆಹಾನಿ ಪರಿಹಾರ ಮೊತ್ತ ಹೆಚ್ಚಳ | ಸರ್ಕಾರದಿಂದ ರೈತರಿಗೆ ಸಹಾಯಹಸ್ತ |

Share

ರೈತ ಬೆಳೆದ ಬೆಳೆಯ ಫಸಲು ಕೈಗೆ ಬರುವವರೆಗೆ ಅದೆಷ್ಟೋ ನಷ್ಟಗಳನ್ನು ಅನುಭವಿಸುತ್ತಾನೆ. ಮಳೆ ಜಾಸ್ತಿಯಾದರೆ ಕೊಚ್ಚಿ ಕೊಂಡು ಹೋಗುತ್ತೆ, ಮಳೆ ಬಂದಿಲ್ಲಾಂದ್ರೆ ಬೆಳೆ ಒಣಗಿ ಹೋಗುತ್ತೆ. ಇದಲ್ಲದೆ ಕಾಡಂಚಿನ ಕೃಷಿ ಭೂಮಿಗೆ ಪ್ರಾಣಿಗಳ ಕಾಟ.. ಅದರಲ್ಲೂ ಆನೆ, ಕಾಡುಕೋಣ, ಹಂದಿ, ನವಿಲು, ಜಿಂಕೆ ಹೀಗೆ ಒಂದಾ ಎರಡಾ..? ತಮಗೆ ಬೇಕಾದ್ದನ್ನು ತಿಂದು ಬೆಳೆ ಹಾನಿ ಮಾಡಿ ಹೋಗುತ್ತವೆ. ಇದರ ಮುಂದೆ ರೈತ, ಏನು ಮಾಡಲಾಗದೆ ಕೈಕಟ್ಟಿ ಕೂರುವ ಪರಿಸ್ಥಿತಿ.

Advertisement
Advertisement
Advertisement
Advertisement

ಕೆಲವೊಂದು ಸಮಸ್ಯೆಗಳಿಗೆ ಸರ್ಕಾರ ಬೆಳೆವಿಮೆ ನೀಡುತಿತ್ತು. ಆದರೆ ಅದು ಅರೆ ಕಾಸಿನ ಮಜ್ಜಿಗೆ. ಇದೀಗ ರೈತರಿಗೆ ನಷ್ಟ ಆಗದ ರೀತಿಯಲ್ಲಿ ಬೆಳೆಗಳಿಗೆ ಬೆಳೆವಿಮೆ ನೀಡಲು ನಿರ್ಧರರಿಸಿದೆ. ಕಾಡು ಪ್ರಾಣಿಗಳ ಕಾಟದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೂ ಪರಿಹಾರ ನೀಡಲು ಸರ್ಕಾರ ಮುಂದೆ ಬಂದಿದೆ.

Advertisement

ಕಾಡು ಪ್ರಾಣಿಗಳು ಬೆಳೆ ನಾಶ ಮಾಡಿದರೆ ಸರ್ಕಾರ ನೀಡುತ್ತೆ ಪರಿಹಾರ :

Advertisement

ಕಾಡು ಪ್ರಾಣಿಗಳಿಂದ ಉಂಟಾದ ಬೆಳೆ ಹಾನಿಗೆ ನೀಡುವ ಪರಿಹಾರದ ಗರಿಷ್ಠ ಮೊತ್ತವನ್ನು 50 ಸಾವಿರ ರೂಗಳಿಂದ 1 ಲಕ್ಷಕ್ಕೆ ಏರಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ರೈತರ ಬಹುಕಾಲದ ಬೇಡಿಕೆಗೆ ಮನ್ನಣೆ ಸಿಕ್ಕಾಂತಾಗಿದೆ. ವನ್ಯ ಜೀವಿಗಳಿಂದ ಉಂಟಾಗೋ ಜಾನುವಾರುಗಳ ಪ್ರಾಣ ಹಾನಿ  ಮತ್ತು ಬೆಳೆ ಹಾನಿಗೆ ಪರಿಹಾರ ಹೆಚ್ಚಿಸುವ  ಮೂಲಕ ಸರ್ಕಾರ ಮತ್ತು ಅರಣ್ಯ ಇಲಾಖೆ ಗ್ರಾಮೀಣ ಜನರಿಗೆ ನೆರವಾಗಿದೆ.

ಅಡಿಕೆ ತೆಂಗು, ಮಾವು, ಭತ್ತ, ರಾಗಿ, ನೆಲಗಡಲೆ, ಟೊಮ್ಯಾಟೋ, ಹಿಪ್ಪು ನೇರಳೆ ಬೆಳೆಗಳ ಪರಿಹಾರ ಮೊತ್ತವನ್ನು ಎರಡು ಪಟ್ಟು ಹೆಚ್ಚಿಸಲಾಗಿದೆ. ಅದೇ ರೀತಿ ಅಧಿಕಾರಿಗಳ ಸರ್ವೆ ಮುಖಾಂತರ ಸರ್ಕಾರದ ಗಮನಕ್ಕೆ ತಂದು ರೈತರಿಗೆ ನಷ್ಟದ ಪರಿಹಾರ ನೀಡಲು ಮುಂದಾಗಿದೆ. ವನ್ಯ ಜೀವಿಗಳ ಕಾಟದಿಂದ ಬೇಸತ್ತಿದ್ದ ರೈತರಿಗೆ ಸರ್ಕಾರದ ಈ ಯೋಜನೆ ತುಸು ನಿಟ್ಟುಸಿರು ಬಿಡುವಂತೆ ಮಾಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

7 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

22 hours ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

1 day ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

1 day ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

1 day ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago