Advertisement
ಸುದ್ದಿಗಳು

ಕಾಡು ಪ್ರಾಣಿಗಳ ಕಾಟಕ್ಕೆ ಬೇಸತ್ತ ರೈತರು | ಬೆಳೆಹಾನಿ ಪರಿಹಾರ ಮೊತ್ತ ಹೆಚ್ಚಳ | ಸರ್ಕಾರದಿಂದ ರೈತರಿಗೆ ಸಹಾಯಹಸ್ತ |

Share

ರೈತ ಬೆಳೆದ ಬೆಳೆಯ ಫಸಲು ಕೈಗೆ ಬರುವವರೆಗೆ ಅದೆಷ್ಟೋ ನಷ್ಟಗಳನ್ನು ಅನುಭವಿಸುತ್ತಾನೆ. ಮಳೆ ಜಾಸ್ತಿಯಾದರೆ ಕೊಚ್ಚಿ ಕೊಂಡು ಹೋಗುತ್ತೆ, ಮಳೆ ಬಂದಿಲ್ಲಾಂದ್ರೆ ಬೆಳೆ ಒಣಗಿ ಹೋಗುತ್ತೆ. ಇದಲ್ಲದೆ ಕಾಡಂಚಿನ ಕೃಷಿ ಭೂಮಿಗೆ ಪ್ರಾಣಿಗಳ ಕಾಟ.. ಅದರಲ್ಲೂ ಆನೆ, ಕಾಡುಕೋಣ, ಹಂದಿ, ನವಿಲು, ಜಿಂಕೆ ಹೀಗೆ ಒಂದಾ ಎರಡಾ..? ತಮಗೆ ಬೇಕಾದ್ದನ್ನು ತಿಂದು ಬೆಳೆ ಹಾನಿ ಮಾಡಿ ಹೋಗುತ್ತವೆ. ಇದರ ಮುಂದೆ ರೈತ, ಏನು ಮಾಡಲಾಗದೆ ಕೈಕಟ್ಟಿ ಕೂರುವ ಪರಿಸ್ಥಿತಿ.

Advertisement
Advertisement

ಕೆಲವೊಂದು ಸಮಸ್ಯೆಗಳಿಗೆ ಸರ್ಕಾರ ಬೆಳೆವಿಮೆ ನೀಡುತಿತ್ತು. ಆದರೆ ಅದು ಅರೆ ಕಾಸಿನ ಮಜ್ಜಿಗೆ. ಇದೀಗ ರೈತರಿಗೆ ನಷ್ಟ ಆಗದ ರೀತಿಯಲ್ಲಿ ಬೆಳೆಗಳಿಗೆ ಬೆಳೆವಿಮೆ ನೀಡಲು ನಿರ್ಧರರಿಸಿದೆ. ಕಾಡು ಪ್ರಾಣಿಗಳ ಕಾಟದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೂ ಪರಿಹಾರ ನೀಡಲು ಸರ್ಕಾರ ಮುಂದೆ ಬಂದಿದೆ.

Advertisement

ಕಾಡು ಪ್ರಾಣಿಗಳು ಬೆಳೆ ನಾಶ ಮಾಡಿದರೆ ಸರ್ಕಾರ ನೀಡುತ್ತೆ ಪರಿಹಾರ :

Advertisement

ಕಾಡು ಪ್ರಾಣಿಗಳಿಂದ ಉಂಟಾದ ಬೆಳೆ ಹಾನಿಗೆ ನೀಡುವ ಪರಿಹಾರದ ಗರಿಷ್ಠ ಮೊತ್ತವನ್ನು 50 ಸಾವಿರ ರೂಗಳಿಂದ 1 ಲಕ್ಷಕ್ಕೆ ಏರಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ರೈತರ ಬಹುಕಾಲದ ಬೇಡಿಕೆಗೆ ಮನ್ನಣೆ ಸಿಕ್ಕಾಂತಾಗಿದೆ. ವನ್ಯ ಜೀವಿಗಳಿಂದ ಉಂಟಾಗೋ ಜಾನುವಾರುಗಳ ಪ್ರಾಣ ಹಾನಿ  ಮತ್ತು ಬೆಳೆ ಹಾನಿಗೆ ಪರಿಹಾರ ಹೆಚ್ಚಿಸುವ  ಮೂಲಕ ಸರ್ಕಾರ ಮತ್ತು ಅರಣ್ಯ ಇಲಾಖೆ ಗ್ರಾಮೀಣ ಜನರಿಗೆ ನೆರವಾಗಿದೆ.

ಅಡಿಕೆ ತೆಂಗು, ಮಾವು, ಭತ್ತ, ರಾಗಿ, ನೆಲಗಡಲೆ, ಟೊಮ್ಯಾಟೋ, ಹಿಪ್ಪು ನೇರಳೆ ಬೆಳೆಗಳ ಪರಿಹಾರ ಮೊತ್ತವನ್ನು ಎರಡು ಪಟ್ಟು ಹೆಚ್ಚಿಸಲಾಗಿದೆ. ಅದೇ ರೀತಿ ಅಧಿಕಾರಿಗಳ ಸರ್ವೆ ಮುಖಾಂತರ ಸರ್ಕಾರದ ಗಮನಕ್ಕೆ ತಂದು ರೈತರಿಗೆ ನಷ್ಟದ ಪರಿಹಾರ ನೀಡಲು ಮುಂದಾಗಿದೆ. ವನ್ಯ ಜೀವಿಗಳ ಕಾಟದಿಂದ ಬೇಸತ್ತಿದ್ದ ರೈತರಿಗೆ ಸರ್ಕಾರದ ಈ ಯೋಜನೆ ತುಸು ನಿಟ್ಟುಸಿರು ಬಿಡುವಂತೆ ಮಾಡಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕ್ಯಾಂಪ್ಕೋದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕ|

ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೇಮಕಗೊಂಡಿದ್ದಾರೆ.

1 hour ago

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

15 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

17 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

22 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

1 day ago