ರೈತ ಬೆಳೆದ ಬೆಳೆಯ ಫಸಲು ಕೈಗೆ ಬರುವವರೆಗೆ ಅದೆಷ್ಟೋ ನಷ್ಟಗಳನ್ನು ಅನುಭವಿಸುತ್ತಾನೆ. ಮಳೆ ಜಾಸ್ತಿಯಾದರೆ ಕೊಚ್ಚಿ ಕೊಂಡು ಹೋಗುತ್ತೆ, ಮಳೆ ಬಂದಿಲ್ಲಾಂದ್ರೆ ಬೆಳೆ ಒಣಗಿ ಹೋಗುತ್ತೆ. ಇದಲ್ಲದೆ ಕಾಡಂಚಿನ ಕೃಷಿ ಭೂಮಿಗೆ ಪ್ರಾಣಿಗಳ ಕಾಟ.. ಅದರಲ್ಲೂ ಆನೆ, ಕಾಡುಕೋಣ, ಹಂದಿ, ನವಿಲು, ಜಿಂಕೆ ಹೀಗೆ ಒಂದಾ ಎರಡಾ..? ತಮಗೆ ಬೇಕಾದ್ದನ್ನು ತಿಂದು ಬೆಳೆ ಹಾನಿ ಮಾಡಿ ಹೋಗುತ್ತವೆ. ಇದರ ಮುಂದೆ ರೈತ, ಏನು ಮಾಡಲಾಗದೆ ಕೈಕಟ್ಟಿ ಕೂರುವ ಪರಿಸ್ಥಿತಿ.
ಕೆಲವೊಂದು ಸಮಸ್ಯೆಗಳಿಗೆ ಸರ್ಕಾರ ಬೆಳೆವಿಮೆ ನೀಡುತಿತ್ತು. ಆದರೆ ಅದು ಅರೆ ಕಾಸಿನ ಮಜ್ಜಿಗೆ. ಇದೀಗ ರೈತರಿಗೆ ನಷ್ಟ ಆಗದ ರೀತಿಯಲ್ಲಿ ಬೆಳೆಗಳಿಗೆ ಬೆಳೆವಿಮೆ ನೀಡಲು ನಿರ್ಧರರಿಸಿದೆ. ಕಾಡು ಪ್ರಾಣಿಗಳ ಕಾಟದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೂ ಪರಿಹಾರ ನೀಡಲು ಸರ್ಕಾರ ಮುಂದೆ ಬಂದಿದೆ.
ಕಾಡು ಪ್ರಾಣಿಗಳು ಬೆಳೆ ನಾಶ ಮಾಡಿದರೆ ಸರ್ಕಾರ ನೀಡುತ್ತೆ ಪರಿಹಾರ :
ಕಾಡು ಪ್ರಾಣಿಗಳಿಂದ ಉಂಟಾದ ಬೆಳೆ ಹಾನಿಗೆ ನೀಡುವ ಪರಿಹಾರದ ಗರಿಷ್ಠ ಮೊತ್ತವನ್ನು 50 ಸಾವಿರ ರೂಗಳಿಂದ 1 ಲಕ್ಷಕ್ಕೆ ಏರಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ರೈತರ ಬಹುಕಾಲದ ಬೇಡಿಕೆಗೆ ಮನ್ನಣೆ ಸಿಕ್ಕಾಂತಾಗಿದೆ. ವನ್ಯ ಜೀವಿಗಳಿಂದ ಉಂಟಾಗೋ ಜಾನುವಾರುಗಳ ಪ್ರಾಣ ಹಾನಿ ಮತ್ತು ಬೆಳೆ ಹಾನಿಗೆ ಪರಿಹಾರ ಹೆಚ್ಚಿಸುವ ಮೂಲಕ ಸರ್ಕಾರ ಮತ್ತು ಅರಣ್ಯ ಇಲಾಖೆ ಗ್ರಾಮೀಣ ಜನರಿಗೆ ನೆರವಾಗಿದೆ.
ಅಡಿಕೆ ತೆಂಗು, ಮಾವು, ಭತ್ತ, ರಾಗಿ, ನೆಲಗಡಲೆ, ಟೊಮ್ಯಾಟೋ, ಹಿಪ್ಪು ನೇರಳೆ ಬೆಳೆಗಳ ಪರಿಹಾರ ಮೊತ್ತವನ್ನು ಎರಡು ಪಟ್ಟು ಹೆಚ್ಚಿಸಲಾಗಿದೆ. ಅದೇ ರೀತಿ ಅಧಿಕಾರಿಗಳ ಸರ್ವೆ ಮುಖಾಂತರ ಸರ್ಕಾರದ ಗಮನಕ್ಕೆ ತಂದು ರೈತರಿಗೆ ನಷ್ಟದ ಪರಿಹಾರ ನೀಡಲು ಮುಂದಾಗಿದೆ. ವನ್ಯ ಜೀವಿಗಳ ಕಾಟದಿಂದ ಬೇಸತ್ತಿದ್ದ ರೈತರಿಗೆ ಸರ್ಕಾರದ ಈ ಯೋಜನೆ ತುಸು ನಿಟ್ಟುಸಿರು ಬಿಡುವಂತೆ ಮಾಡಿದೆ.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…