Advertisement
ಸುದ್ದಿಗಳು

ಕಾಡು ಪ್ರಾಣಿಗಳ ಕಾಟಕ್ಕೆ ಬೇಸತ್ತ ರೈತರು | ಬೆಳೆಹಾನಿ ಪರಿಹಾರ ಮೊತ್ತ ಹೆಚ್ಚಳ | ಸರ್ಕಾರದಿಂದ ರೈತರಿಗೆ ಸಹಾಯಹಸ್ತ |

Share

ರೈತ ಬೆಳೆದ ಬೆಳೆಯ ಫಸಲು ಕೈಗೆ ಬರುವವರೆಗೆ ಅದೆಷ್ಟೋ ನಷ್ಟಗಳನ್ನು ಅನುಭವಿಸುತ್ತಾನೆ. ಮಳೆ ಜಾಸ್ತಿಯಾದರೆ ಕೊಚ್ಚಿ ಕೊಂಡು ಹೋಗುತ್ತೆ, ಮಳೆ ಬಂದಿಲ್ಲಾಂದ್ರೆ ಬೆಳೆ ಒಣಗಿ ಹೋಗುತ್ತೆ. ಇದಲ್ಲದೆ ಕಾಡಂಚಿನ ಕೃಷಿ ಭೂಮಿಗೆ ಪ್ರಾಣಿಗಳ ಕಾಟ.. ಅದರಲ್ಲೂ ಆನೆ, ಕಾಡುಕೋಣ, ಹಂದಿ, ನವಿಲು, ಜಿಂಕೆ ಹೀಗೆ ಒಂದಾ ಎರಡಾ..? ತಮಗೆ ಬೇಕಾದ್ದನ್ನು ತಿಂದು ಬೆಳೆ ಹಾನಿ ಮಾಡಿ ಹೋಗುತ್ತವೆ. ಇದರ ಮುಂದೆ ರೈತ, ಏನು ಮಾಡಲಾಗದೆ ಕೈಕಟ್ಟಿ ಕೂರುವ ಪರಿಸ್ಥಿತಿ.

ಕೆಲವೊಂದು ಸಮಸ್ಯೆಗಳಿಗೆ ಸರ್ಕಾರ ಬೆಳೆವಿಮೆ ನೀಡುತಿತ್ತು. ಆದರೆ ಅದು ಅರೆ ಕಾಸಿನ ಮಜ್ಜಿಗೆ. ಇದೀಗ ರೈತರಿಗೆ ನಷ್ಟ ಆಗದ ರೀತಿಯಲ್ಲಿ ಬೆಳೆಗಳಿಗೆ ಬೆಳೆವಿಮೆ ನೀಡಲು ನಿರ್ಧರರಿಸಿದೆ. ಕಾಡು ಪ್ರಾಣಿಗಳ ಕಾಟದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೂ ಪರಿಹಾರ ನೀಡಲು ಸರ್ಕಾರ ಮುಂದೆ ಬಂದಿದೆ.

ಕಾಡು ಪ್ರಾಣಿಗಳು ಬೆಳೆ ನಾಶ ಮಾಡಿದರೆ ಸರ್ಕಾರ ನೀಡುತ್ತೆ ಪರಿಹಾರ :

ಕಾಡು ಪ್ರಾಣಿಗಳಿಂದ ಉಂಟಾದ ಬೆಳೆ ಹಾನಿಗೆ ನೀಡುವ ಪರಿಹಾರದ ಗರಿಷ್ಠ ಮೊತ್ತವನ್ನು 50 ಸಾವಿರ ರೂಗಳಿಂದ 1 ಲಕ್ಷಕ್ಕೆ ಏರಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ರೈತರ ಬಹುಕಾಲದ ಬೇಡಿಕೆಗೆ ಮನ್ನಣೆ ಸಿಕ್ಕಾಂತಾಗಿದೆ. ವನ್ಯ ಜೀವಿಗಳಿಂದ ಉಂಟಾಗೋ ಜಾನುವಾರುಗಳ ಪ್ರಾಣ ಹಾನಿ  ಮತ್ತು ಬೆಳೆ ಹಾನಿಗೆ ಪರಿಹಾರ ಹೆಚ್ಚಿಸುವ  ಮೂಲಕ ಸರ್ಕಾರ ಮತ್ತು ಅರಣ್ಯ ಇಲಾಖೆ ಗ್ರಾಮೀಣ ಜನರಿಗೆ ನೆರವಾಗಿದೆ.

ಅಡಿಕೆ ತೆಂಗು, ಮಾವು, ಭತ್ತ, ರಾಗಿ, ನೆಲಗಡಲೆ, ಟೊಮ್ಯಾಟೋ, ಹಿಪ್ಪು ನೇರಳೆ ಬೆಳೆಗಳ ಪರಿಹಾರ ಮೊತ್ತವನ್ನು ಎರಡು ಪಟ್ಟು ಹೆಚ್ಚಿಸಲಾಗಿದೆ. ಅದೇ ರೀತಿ ಅಧಿಕಾರಿಗಳ ಸರ್ವೆ ಮುಖಾಂತರ ಸರ್ಕಾರದ ಗಮನಕ್ಕೆ ತಂದು ರೈತರಿಗೆ ನಷ್ಟದ ಪರಿಹಾರ ನೀಡಲು ಮುಂದಾಗಿದೆ. ವನ್ಯ ಜೀವಿಗಳ ಕಾಟದಿಂದ ಬೇಸತ್ತಿದ್ದ ರೈತರಿಗೆ ಸರ್ಕಾರದ ಈ ಯೋಜನೆ ತುಸು ನಿಟ್ಟುಸಿರು ಬಿಡುವಂತೆ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

3 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

8 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

16 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

17 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago