ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿದ ಸಚಿವ ಡಾ.ಶರಣಪ್ರಕಾಶ ಪಾಟೀಲ

September 1, 2025
9:28 PM

ಅತಿಯಾದ ಮಳೆಯಿಂದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಹಾನಿಯಾದ ಬೆಳೆಗಳನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಪಾಟೀಲ ವೀಕ್ಷಿಸಿದರು. ಸತತವಾಗಿ ಸುರಿದ ಮಳೆಯಿಂದ ಬೆಳೆ ನಷ್ಟ ಉಂಟಾದ ಪ್ರಮುಖ ಹೊಲಗಳಿಗೆ ತೆರಳಿದ ಸಚಿವರು, ಹೆಸರು ಹಾಗೂ ತೊಗರಿ ಬೆಳೆಗಳನ್ನು ಪರಿಶೀಲನೆ ನಡೆಸಿದರು. ನಂತರ ಸೇಡಂ ತಾಲೂಕಿನ ಕಲಕಂಭ ಹಾಗೂ ಅಳ್ಳೊಳ್ಳಿ ಗ್ರಾಮಗಳ ಹೊಲಗಳಿಗೆ ತೆರಳಿ ರೈತರ ಅಹವಾಲುಗಳನ್ನು ಆಲಿಸಿದರು. ಇದೇ ವೇಳೆ ಕೃಷಿ ಅಧಿಕಾರಿಗಳಿಗೆ ಬೆಳೆ ಹಾನಿ ಬಗ್ಗೆ ಪ್ರಾಥಮಿಕ ವರದಿಯನ್ನು ನೀಡುವಂತೆ ಸಚಿವರು ಸೂಚನೆ ನೀಡಿದರು.

ಅತಿಯಾದ ಮಳೆಯಿಂದ ಬೆಳೆ ಹಾನಿಗೊಳಗಾದ ಸೇಡಂ ತಾಲೂಕಿನ ಮುಧೋಳ, ಆಡಕಿ, ಬಿದರ್ ಚೇಡ್, ಹುಡಾ, ನೀಲಹಳ್ಳಿ, ಕೊಂಕನಳ್ಳಿ ಗ್ರಾಮಗಳ ಹೊಲಗಳಿಗೆ ತೆರಳಿ  ಪರಿಶೀಲನೆ ನಡೆಸಿದರು. ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ತೊಗರಿ, ಹೆಸರು ಹಾಗೂ ಉದ್ದು ಬೆಳೆಗಳ ಸ್ಥಿತಿಯನ್ನು ಕಂಡು ಬೆಳೆ ಹಾನಿ ಪರಿಹಾರ ಒದಗಿಸುವ ಕುರಿತು ರೈತರಿಗೆ ಭರವಸೆ ನೀಡಿದರು. ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಕ್ತ ಪರಿಹಾರ ನೀಡುವಂತೆ ಸೂಚನೆ ನೀಡಿದ್ದು,  ಕೃಷಿ ಇಲಾಯಿಂದ ಒದಗಿಸಲಾಗುವ ಬೆಳೆ ಕಟಾವು ಯಂತ್ರಗಳ ಬಾಡಿಗೆ ಕಡಿಮೆ ದರದಲ್ಲಿ ನೀಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror