ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿದ ಸಚಿವ ಡಾ.ಶರಣಪ್ರಕಾಶ ಪಾಟೀಲ

September 1, 2025
9:28 PM

ಅತಿಯಾದ ಮಳೆಯಿಂದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಹಾನಿಯಾದ ಬೆಳೆಗಳನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಪಾಟೀಲ ವೀಕ್ಷಿಸಿದರು. ಸತತವಾಗಿ ಸುರಿದ ಮಳೆಯಿಂದ ಬೆಳೆ ನಷ್ಟ ಉಂಟಾದ ಪ್ರಮುಖ ಹೊಲಗಳಿಗೆ ತೆರಳಿದ ಸಚಿವರು, ಹೆಸರು ಹಾಗೂ ತೊಗರಿ ಬೆಳೆಗಳನ್ನು ಪರಿಶೀಲನೆ ನಡೆಸಿದರು. ನಂತರ ಸೇಡಂ ತಾಲೂಕಿನ ಕಲಕಂಭ ಹಾಗೂ ಅಳ್ಳೊಳ್ಳಿ ಗ್ರಾಮಗಳ ಹೊಲಗಳಿಗೆ ತೆರಳಿ ರೈತರ ಅಹವಾಲುಗಳನ್ನು ಆಲಿಸಿದರು. ಇದೇ ವೇಳೆ ಕೃಷಿ ಅಧಿಕಾರಿಗಳಿಗೆ ಬೆಳೆ ಹಾನಿ ಬಗ್ಗೆ ಪ್ರಾಥಮಿಕ ವರದಿಯನ್ನು ನೀಡುವಂತೆ ಸಚಿವರು ಸೂಚನೆ ನೀಡಿದರು.

ಅತಿಯಾದ ಮಳೆಯಿಂದ ಬೆಳೆ ಹಾನಿಗೊಳಗಾದ ಸೇಡಂ ತಾಲೂಕಿನ ಮುಧೋಳ, ಆಡಕಿ, ಬಿದರ್ ಚೇಡ್, ಹುಡಾ, ನೀಲಹಳ್ಳಿ, ಕೊಂಕನಳ್ಳಿ ಗ್ರಾಮಗಳ ಹೊಲಗಳಿಗೆ ತೆರಳಿ  ಪರಿಶೀಲನೆ ನಡೆಸಿದರು. ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ತೊಗರಿ, ಹೆಸರು ಹಾಗೂ ಉದ್ದು ಬೆಳೆಗಳ ಸ್ಥಿತಿಯನ್ನು ಕಂಡು ಬೆಳೆ ಹಾನಿ ಪರಿಹಾರ ಒದಗಿಸುವ ಕುರಿತು ರೈತರಿಗೆ ಭರವಸೆ ನೀಡಿದರು. ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಕ್ತ ಪರಿಹಾರ ನೀಡುವಂತೆ ಸೂಚನೆ ನೀಡಿದ್ದು,  ಕೃಷಿ ಇಲಾಯಿಂದ ಒದಗಿಸಲಾಗುವ ಬೆಳೆ ಕಟಾವು ಯಂತ್ರಗಳ ಬಾಡಿಗೆ ಕಡಿಮೆ ದರದಲ್ಲಿ ನೀಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ
August 3, 2026
5:45 PM
by: ದ ರೂರಲ್ ಮಿರರ್.ಕಾಂ
ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
August 3, 2026
4:38 PM
by: ದ ರೂರಲ್ ಮಿರರ್.ಕಾಂ
ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?
August 3, 2026
3:37 PM
by: ಮಹೇಶ್ ಪುಚ್ಚಪ್ಪಾಡಿ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror