Advertisement
MIRROR FOCUS

ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿದ ಸಚಿವ ಡಾ.ಶರಣಪ್ರಕಾಶ ಪಾಟೀಲ

Share

ಅತಿಯಾದ ಮಳೆಯಿಂದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಹಾನಿಯಾದ ಬೆಳೆಗಳನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಪಾಟೀಲ ವೀಕ್ಷಿಸಿದರು. ಸತತವಾಗಿ ಸುರಿದ ಮಳೆಯಿಂದ ಬೆಳೆ ನಷ್ಟ ಉಂಟಾದ ಪ್ರಮುಖ ಹೊಲಗಳಿಗೆ ತೆರಳಿದ ಸಚಿವರು, ಹೆಸರು ಹಾಗೂ ತೊಗರಿ ಬೆಳೆಗಳನ್ನು ಪರಿಶೀಲನೆ ನಡೆಸಿದರು. ನಂತರ ಸೇಡಂ ತಾಲೂಕಿನ ಕಲಕಂಭ ಹಾಗೂ ಅಳ್ಳೊಳ್ಳಿ ಗ್ರಾಮಗಳ ಹೊಲಗಳಿಗೆ ತೆರಳಿ ರೈತರ ಅಹವಾಲುಗಳನ್ನು ಆಲಿಸಿದರು. ಇದೇ ವೇಳೆ ಕೃಷಿ ಅಧಿಕಾರಿಗಳಿಗೆ ಬೆಳೆ ಹಾನಿ ಬಗ್ಗೆ ಪ್ರಾಥಮಿಕ ವರದಿಯನ್ನು ನೀಡುವಂತೆ ಸಚಿವರು ಸೂಚನೆ ನೀಡಿದರು.

ಅತಿಯಾದ ಮಳೆಯಿಂದ ಬೆಳೆ ಹಾನಿಗೊಳಗಾದ ಸೇಡಂ ತಾಲೂಕಿನ ಮುಧೋಳ, ಆಡಕಿ, ಬಿದರ್ ಚೇಡ್, ಹುಡಾ, ನೀಲಹಳ್ಳಿ, ಕೊಂಕನಳ್ಳಿ ಗ್ರಾಮಗಳ ಹೊಲಗಳಿಗೆ ತೆರಳಿ  ಪರಿಶೀಲನೆ ನಡೆಸಿದರು. ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ತೊಗರಿ, ಹೆಸರು ಹಾಗೂ ಉದ್ದು ಬೆಳೆಗಳ ಸ್ಥಿತಿಯನ್ನು ಕಂಡು ಬೆಳೆ ಹಾನಿ ಪರಿಹಾರ ಒದಗಿಸುವ ಕುರಿತು ರೈತರಿಗೆ ಭರವಸೆ ನೀಡಿದರು. ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಕ್ತ ಪರಿಹಾರ ನೀಡುವಂತೆ ಸೂಚನೆ ನೀಡಿದ್ದು,  ಕೃಷಿ ಇಲಾಯಿಂದ ಒದಗಿಸಲಾಗುವ ಬೆಳೆ ಕಟಾವು ಯಂತ್ರಗಳ ಬಾಡಿಗೆ ಕಡಿಮೆ ದರದಲ್ಲಿ ನೀಡುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 hour ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 hour ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

2 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

2 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

10 hours ago