2022-23ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್ ಅಭಿವೃದ್ದಿ ಪಡಿಸಲಾಗಿದೆ. ದ ಕ ಜಿಲ್ಲೆಯ ರೈತರು ಗೂಗಲ್ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ವೆಬ್ಸೈಟ್ https://play.google.com/store/apps/details?id=com.csk.Khariffarner22_23.cropsurvey ಲಿಂಕ್ ಮೂಲಕ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಇದೇ ಸೆ.30ರೊಳಗೆ ಸ್ವತ: ಬೆಳೆ ಸಮೀಕ್ಷೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪ ಪರಿಹಾರ ವಿತರಣೆ, ಬೆಂಬಲ ಬೆಲೆ ಯೊಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು.
ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…