2022-23ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್ ಅಭಿವೃದ್ದಿ ಪಡಿಸಲಾಗಿದೆ. ದ ಕ ಜಿಲ್ಲೆಯ ರೈತರು ಗೂಗಲ್ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ವೆಬ್ಸೈಟ್ https://play.google.com/store/apps/details?id=com.csk.Khariffarner22_23.cropsurvey ಲಿಂಕ್ ಮೂಲಕ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಇದೇ ಸೆ.30ರೊಳಗೆ ಸ್ವತ: ಬೆಳೆ ಸಮೀಕ್ಷೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪ ಪರಿಹಾರ ವಿತರಣೆ, ಬೆಂಬಲ ಬೆಲೆ ಯೊಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು.
ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…