ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ತರುವ ಬೆಳೆಗಳತ್ತ ರೈತರು ಮನಸ್ಸು ಮಾಡಬೇಕು

July 1, 2025
9:57 AM

ಕೃಷಿ, ತೋಟಗಾರಿಕೆ ಕೃಷಿಯಲ್ಲಿ ಆಧುನಿಕ ಪದ್ಧತಿಯನ್ನು ಅನುಸರಿಸಿ ಆದಾಯ ಕಂಡುಕೊಳ್ಳಬೇಕು. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಬರುವಂತಹ ಬೆಳೆಗಳನ್ನು ಬೆಳೆಯುವ ಕಡೆಗೆ ರೈತರು ಮುಂದಾಗಬೇಕು ಎಂದು  ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಮೈಸೂರು ತಾಲ್ಲೂಕಿನ ತೋಟಗಾರಿಕೆ ಮಹಾವಿದ್ಯಾಲಯದ ಆವರಣದಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದ ಸಹಯೋಗದೊಂದಿಗೆ ಹುಣಸೂರು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದ ರೈತರಿಗೆ ಏರ್ಪಡಿಸಿದ್ದ ತೋಟಗಾರಿಕೆ ಆಧಾರಿತ ಕೃಷಿ ಪದ್ಧತಿಯ ತರಬೇತಿ ಹಾಗೂ ಪರಿಕರಗಳ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.  ಎರಡು ಎಕರೆಯಲ್ಲಿ ಒಂದು ಎಕರೆಯನ್ನು ಸಮಗ್ರ ಕೃಷಿ ಪದ್ಧತಿಗೆ ಅನುಸರಿಸಬೇಕು. ಇಂದು ತರಕಾರಿ, ಹಣ್ಣುಗಳ ದರ ಹೆಚ್ಚಾಗಿರುವ ಕಾರಣ ಆದಾಯ ಮಾತ್ರ ತಪ್ಪುವುದಿಲ್ಲ. ತೋಟಗಾರಿಕೆ ಕೃಷಿಮಾಡಲು ಹೆಚ್ಚು ನೀರು ಬೇಕಿಲ್ಲ. ಹನಿ ನೀರಾವರಿ ಬಳಸಬಹುದು. ಸರ್ಕಾರದಿಂದಲೂ ಹನಿ, ತುಂತುರು ನೀರಾವರಿಗೆ ಸಬ್ಸಿಡಿ ಕೊಡುವುದರಿಂದ ರೈತರು ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror