ಕೃಷಿ, ತೋಟಗಾರಿಕೆ ಕೃಷಿಯಲ್ಲಿ ಆಧುನಿಕ ಪದ್ಧತಿಯನ್ನು ಅನುಸರಿಸಿ ಆದಾಯ ಕಂಡುಕೊಳ್ಳಬೇಕು. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಬರುವಂತಹ ಬೆಳೆಗಳನ್ನು ಬೆಳೆಯುವ ಕಡೆಗೆ ರೈತರು ಮುಂದಾಗಬೇಕು ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ಮೈಸೂರು ತಾಲ್ಲೂಕಿನ ತೋಟಗಾರಿಕೆ ಮಹಾವಿದ್ಯಾಲಯದ ಆವರಣದಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದ ಸಹಯೋಗದೊಂದಿಗೆ ಹುಣಸೂರು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದ ರೈತರಿಗೆ ಏರ್ಪಡಿಸಿದ್ದ ತೋಟಗಾರಿಕೆ ಆಧಾರಿತ ಕೃಷಿ ಪದ್ಧತಿಯ ತರಬೇತಿ ಹಾಗೂ ಪರಿಕರಗಳ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಎರಡು ಎಕರೆಯಲ್ಲಿ ಒಂದು ಎಕರೆಯನ್ನು ಸಮಗ್ರ ಕೃಷಿ ಪದ್ಧತಿಗೆ ಅನುಸರಿಸಬೇಕು. ಇಂದು ತರಕಾರಿ, ಹಣ್ಣುಗಳ ದರ ಹೆಚ್ಚಾಗಿರುವ ಕಾರಣ ಆದಾಯ ಮಾತ್ರ ತಪ್ಪುವುದಿಲ್ಲ. ತೋಟಗಾರಿಕೆ ಕೃಷಿಮಾಡಲು ಹೆಚ್ಚು ನೀರು ಬೇಕಿಲ್ಲ. ಹನಿ ನೀರಾವರಿ ಬಳಸಬಹುದು. ಸರ್ಕಾರದಿಂದಲೂ ಹನಿ, ತುಂತುರು ನೀರಾವರಿಗೆ ಸಬ್ಸಿಡಿ ಕೊಡುವುದರಿಂದ ರೈತರು ಬಳಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…