Advertisement
ವೆದರ್ ಮಿರರ್

#WeatherMirror| ಉತ್ತರ ಕರ್ನಾಟಕದಲ್ಲಿ ಮಳೆಗಾಗಿ ಕಾಯುತ್ತಿರುವ ಬೆಳೆಗಳು |

Share

ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಒಳನಾಡಿನಲ್ಲಿ ಬಿಸಿಲಿನ ಪ್ರಖರತೆ ಕೊಂಚ ಹೆಚ್ಚಳವಾಗಲಿದೆ. ಆದರೆ ಕರ್ನಾಟಕದ #Karnataka  ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 20ರವರೆಗೆ ಧಾರಾಕಾರ ಮಳೆ#Rain ಸುರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.  ನಿನ್ನೆಯಿಂದ ರಾಜ್ಯದ ಕೆಲವೆಡೆ ಮತ್ತೆ ಮುಂಗಾರು ಚುರುಕು ಪಡೆದುಕೊಂಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕನಕಪುರ, ಮಂಕಿ, ಉಡುಪಿಯಲ್ಲಿ ಮಳೆಯಾಗಿದೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾನುವಾರ ಸಾಧಾರಣ ಮಳೆಯಾಗಿದೆ, ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಗರಿಷ್ಠ 30 ರಿಂದ 32 ಡಿಗ್ರಿ ಸೆಲ್ಸಿಯಸ್​ವರೆಗೆ ತಾಪಮಾನ ದಾಖಲಾಗುತ್ತಿದೆ. ಇದರ ಜೊತೆ ಕೆಲ ಪ್ರದೇಶಗಳಲ್ಲಿ ಮಳೆಯ ಸಿಂಚನ ಆಗಿದೆ.

ಭಾರತೀಯ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಇವುಗಳಲ್ಲಿ ಹಿಮಾಚಲ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಉತ್ತರಾಖಂಡದ ಹೆಸರುಗಳೂ ಸೇರಿವೆ. ಸದ್ಯ, ಕಳೆದ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆ ಉತ್ತರಾಖಂಡದಲ್ಲಿ ಸಂಕಷ್ಟದ ಪರಿಸ್ಥಿತಿ ನಿರ್ಮಾಣ ಮಾಡಿದೆ. ಅದೇ ಸಮಯದಲ್ಲಿ, ಹವಾಮಾನ ಇಲಾಖೆ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.  ಪ್ರಸ್ತುತ, ಭಾರತೀಯ ಹವಾಮಾನ ಇಲಾಖೆ ಉತ್ತರಾಖಂಡದಲ್ಲಿ ಮಳೆಗಾಗಿ ರೆಡ್ ಅಲರ್ಟ್ ಘೋಷಿಸಿದೆ ಮತ್ತು ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಆರು ಜಿಲ್ಲೆಗಳಲ್ಲಿ ಸಿಡಿಲು ಮುನ್ಸೂಚನೆ ನೀಡಿದೆ.

(With inputs from agencies)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

4 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

15 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

16 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

19 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago