ಸುದ್ದಿಗಳು

#JackfruitFestival | ಮೇಣ ಇಲ್ಲದ ಹಲಸಿಗೆ ಮಾರು ಹೋದ ಹಲಸು ಪ್ರಿಯರು…! | ಮೈಸೂರಿನ ಹಲಸಿನ ಮೇಳಕ್ಕೆ ಜನ ಸಾಗರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇವಲ ಬಡವರ ಪಾಲಿನ ಹಸಿವು ನೀಗಿಸುತ್ತಿದ್ದ ಹಲಸಿಗೆ ಈಗ ಅಂತರಾಷ್ಟ್ರೀಯ ಮನ್ನಣೆ. ಹಲಸು ಯಥೇಚ್ಚವಾಗಿ ಬೆಳೆಯುವ ಹಣ್ಣಾಗಿ, ವಾಣಿಜ್ಯ ಬೆಳೆಯಾಗಿ ಪರಿವರ್ತಿತವಾಗುತ್ತಿರುವುದು ಖುಷಿಯ ವಿಚಾರ. ಇದಕ್ಕೆ ಮೂಲ ಕಾರಣ ಅಲ್ಲಲ್ಲಿ ಆಯೋಜನೆಗೊಳ್ಳುತ್ತಿರುವ ಹಲಸಿನ ಮೇಳಗಳು.

Advertisement
Advertisement

ಚಂದ್ರ, ಭೈರಸಂದ್ರ, ಲಾಲ್‌ ಬಾಗ್‌ ಮಧುರ, ರುದ್ರಾಕ್ಷಿ, ಸರ್ವಋತು ಅಷ್ಟೇ ಅಲ್ಲ ಅಂಟು ರಹಿತ ಹಲಸಿನ ಸಾಲುಗಳು. ಇನ್ನೇನು ಅಲ್ಲೇ ಬಿಸಿ ಬಿಸಿಯಾಗಿ ಎಣ್ಣೆಯಲ್ಲಿ ತಯಾರಾಗೋ ಹಲಸಿನ ತಿಂಡಿ ತಿನಿಸುಗಳು. ಇದೆಲ್ಲವನ್ನೂ ಕಂಡು ಖರೀದಿಗೆ ಮುಗಿಬಿದ್ದ ಗ್ರಾಹಕರು. ಈ ಎಲ್ಲ ದೃಶ್ಯ ಕಂಡುಬಂದಿದ್ದು  ಸಾಂಸ್ಕೃತಿಕ ನಗರಿ ಮೈಸೂರುನಲ್ಲಿ ನಡೆದ ಹಲಸಿನ ಮೇಳದಲ್ಲಿ.

ಫುಡ್‌ ಪ್ರಿಯರು ಹಲಸಿನ ತರಹೇವಾರಿ ತಿಂಡಿಗೆ ಫಿದಾ ಆದ್ರು. ವೆರೈಟಿ ಹಲಸಿನ ಹಣ್ಣುಗಳ ಜೊತೆಗೆ ಹಲಸಿನ ಹೋಳಿಗೆ, ಹಲಸಿನ ಚಿಪ್ಸು, ಹಲಸಿನಕಾಯಿ ಕಬಾಬು, ಹಲಸಿನ ಬಿರಿಯಾನಿ ಹೀಗೆ ಅನೇಕ ಹಲಸಿನ ಖಾದ್ಯಗಳನ್ನು ಸವಿಯೋ ಅವಕಾಶ ಆಹಾರ ಪ್ರಿಯರಿಗೆ ಸಿಕ್ಕಿತು. ಮೈಸೂರು ನಗರದ ನೆಕ್ಸಸ್ ಸೆಂಟರ್ ಸಿಟಿ ಮಾಲ್ ಇಂತಹದ್ದೊಂದು ಕಾರ್ಯಕ್ರಮ ಕಂಡು ಸಾಂಸ್ಕೃತಿಕ ನಗರಿಯ ಫುಡ್‌ ಪ್ರಿಯರಂತೂ ಫುಲ್‌ ಫಿದಾ ಆದ್ರು. ತಮ್ಮಿಷ್ಟದ ತಿಂಡಿ ತಿನಿಸುಗಳನ್ನ ಸವಿದು ಬಾಯಿ ಚಪ್ಪರಿಸಿಕೊಂಡರು.

ಚಂದ್ರ ಹಲಸು ಆಕರ್ಷಣೆ: ಇನ್ನು ವಿವಿಧ ತಳಿಯ ಹಲಸಿನ ಹಣ್ಣಿನ ಮಾರಾಟವೂ ನಡೆಯಿತು. ರಾಜ್ಯದ ಅನೇಕ ಜಿಲ್ಲೆಗಳಿಂದ ಮೈಸೂರಿಗೆ ಬಂದಿದ್ದ ರೈತರು, ಮಹಿಳಾ ಗುಂಪುಗಳು ಹಲಸಿನ ಪದಾರ್ಥ, ಸಿರಿಧಾನ್ಯ, ಕರಕುಶಲ ವಸ್ತುಗಳು, ಸಾವಯವ ಉತ್ಪನ್ನಗಳನ್ನು ಮಾರಾಟ ಮಾಡಿದರು.

ಇದರ ಜೊತೆಗೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ವಿಶೇಷವಾದ ಚಂದ್ರ ಹಲಸು ಹಬ್ಬಕ್ಕೆ ಬಂದಂತಹ ಜನರನ್ನು ತನ್ನತ್ತ ಆಕರ್ಷಿಸುತ್ತಿತ್ತು. ಹೀಗೆ ಮೈಸೂರಿನಲ್ಲಿ ನಡೆದ ಹಲಸು ಹಬ್ಬವು ಆಹಾರ ಪ್ರಿಯರ ಬಾಯಿ ರುಚಿ ಹೆಚ್ಚಿಸಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

12 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

21 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

22 hours ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

22 hours ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

1 day ago

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…

1 day ago