Advertisement
ಸುದ್ದಿಗಳು

#JackfruitFestival | ಮೇಣ ಇಲ್ಲದ ಹಲಸಿಗೆ ಮಾರು ಹೋದ ಹಲಸು ಪ್ರಿಯರು…! | ಮೈಸೂರಿನ ಹಲಸಿನ ಮೇಳಕ್ಕೆ ಜನ ಸಾಗರ |

Share

ಕೇವಲ ಬಡವರ ಪಾಲಿನ ಹಸಿವು ನೀಗಿಸುತ್ತಿದ್ದ ಹಲಸಿಗೆ ಈಗ ಅಂತರಾಷ್ಟ್ರೀಯ ಮನ್ನಣೆ. ಹಲಸು ಯಥೇಚ್ಚವಾಗಿ ಬೆಳೆಯುವ ಹಣ್ಣಾಗಿ, ವಾಣಿಜ್ಯ ಬೆಳೆಯಾಗಿ ಪರಿವರ್ತಿತವಾಗುತ್ತಿರುವುದು ಖುಷಿಯ ವಿಚಾರ. ಇದಕ್ಕೆ ಮೂಲ ಕಾರಣ ಅಲ್ಲಲ್ಲಿ ಆಯೋಜನೆಗೊಳ್ಳುತ್ತಿರುವ ಹಲಸಿನ ಮೇಳಗಳು.

Advertisement

ಚಂದ್ರ, ಭೈರಸಂದ್ರ, ಲಾಲ್‌ ಬಾಗ್‌ ಮಧುರ, ರುದ್ರಾಕ್ಷಿ, ಸರ್ವಋತು ಅಷ್ಟೇ ಅಲ್ಲ ಅಂಟು ರಹಿತ ಹಲಸಿನ ಸಾಲುಗಳು. ಇನ್ನೇನು ಅಲ್ಲೇ ಬಿಸಿ ಬಿಸಿಯಾಗಿ ಎಣ್ಣೆಯಲ್ಲಿ ತಯಾರಾಗೋ ಹಲಸಿನ ತಿಂಡಿ ತಿನಿಸುಗಳು. ಇದೆಲ್ಲವನ್ನೂ ಕಂಡು ಖರೀದಿಗೆ ಮುಗಿಬಿದ್ದ ಗ್ರಾಹಕರು. ಈ ಎಲ್ಲ ದೃಶ್ಯ ಕಂಡುಬಂದಿದ್ದು  ಸಾಂಸ್ಕೃತಿಕ ನಗರಿ ಮೈಸೂರುನಲ್ಲಿ ನಡೆದ ಹಲಸಿನ ಮೇಳದಲ್ಲಿ.

ಫುಡ್‌ ಪ್ರಿಯರು ಹಲಸಿನ ತರಹೇವಾರಿ ತಿಂಡಿಗೆ ಫಿದಾ ಆದ್ರು. ವೆರೈಟಿ ಹಲಸಿನ ಹಣ್ಣುಗಳ ಜೊತೆಗೆ ಹಲಸಿನ ಹೋಳಿಗೆ, ಹಲಸಿನ ಚಿಪ್ಸು, ಹಲಸಿನಕಾಯಿ ಕಬಾಬು, ಹಲಸಿನ ಬಿರಿಯಾನಿ ಹೀಗೆ ಅನೇಕ ಹಲಸಿನ ಖಾದ್ಯಗಳನ್ನು ಸವಿಯೋ ಅವಕಾಶ ಆಹಾರ ಪ್ರಿಯರಿಗೆ ಸಿಕ್ಕಿತು. ಮೈಸೂರು ನಗರದ ನೆಕ್ಸಸ್ ಸೆಂಟರ್ ಸಿಟಿ ಮಾಲ್ ಇಂತಹದ್ದೊಂದು ಕಾರ್ಯಕ್ರಮ ಕಂಡು ಸಾಂಸ್ಕೃತಿಕ ನಗರಿಯ ಫುಡ್‌ ಪ್ರಿಯರಂತೂ ಫುಲ್‌ ಫಿದಾ ಆದ್ರು. ತಮ್ಮಿಷ್ಟದ ತಿಂಡಿ ತಿನಿಸುಗಳನ್ನ ಸವಿದು ಬಾಯಿ ಚಪ್ಪರಿಸಿಕೊಂಡರು.

ಚಂದ್ರ ಹಲಸು ಆಕರ್ಷಣೆ: ಇನ್ನು ವಿವಿಧ ತಳಿಯ ಹಲಸಿನ ಹಣ್ಣಿನ ಮಾರಾಟವೂ ನಡೆಯಿತು. ರಾಜ್ಯದ ಅನೇಕ ಜಿಲ್ಲೆಗಳಿಂದ ಮೈಸೂರಿಗೆ ಬಂದಿದ್ದ ರೈತರು, ಮಹಿಳಾ ಗುಂಪುಗಳು ಹಲಸಿನ ಪದಾರ್ಥ, ಸಿರಿಧಾನ್ಯ, ಕರಕುಶಲ ವಸ್ತುಗಳು, ಸಾವಯವ ಉತ್ಪನ್ನಗಳನ್ನು ಮಾರಾಟ ಮಾಡಿದರು.

ಇದರ ಜೊತೆಗೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ವಿಶೇಷವಾದ ಚಂದ್ರ ಹಲಸು ಹಬ್ಬಕ್ಕೆ ಬಂದಂತಹ ಜನರನ್ನು ತನ್ನತ್ತ ಆಕರ್ಷಿಸುತ್ತಿತ್ತು. ಹೀಗೆ ಮೈಸೂರಿನಲ್ಲಿ ನಡೆದ ಹಲಸು ಹಬ್ಬವು ಆಹಾರ ಪ್ರಿಯರ ಬಾಯಿ ರುಚಿ ಹೆಚ್ಚಿಸಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

7 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

12 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

13 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

13 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

21 hours ago

ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ

 ಮಂಗಳೂರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಅಡಿಕೆ ಕುರಿತಾದ ವೈಜ್ಞಾನಿಕ ಸಂಶೋಧನಾ ಪುಸ್ತಕ"ARECANUT" ಬಿಡುಗಡೆ…

21 hours ago