Advertisement
ಸುದ್ದಿಗಳು

#JackfruitFestival | ಮೇಣ ಇಲ್ಲದ ಹಲಸಿಗೆ ಮಾರು ಹೋದ ಹಲಸು ಪ್ರಿಯರು…! | ಮೈಸೂರಿನ ಹಲಸಿನ ಮೇಳಕ್ಕೆ ಜನ ಸಾಗರ |

Share

ಕೇವಲ ಬಡವರ ಪಾಲಿನ ಹಸಿವು ನೀಗಿಸುತ್ತಿದ್ದ ಹಲಸಿಗೆ ಈಗ ಅಂತರಾಷ್ಟ್ರೀಯ ಮನ್ನಣೆ. ಹಲಸು ಯಥೇಚ್ಚವಾಗಿ ಬೆಳೆಯುವ ಹಣ್ಣಾಗಿ, ವಾಣಿಜ್ಯ ಬೆಳೆಯಾಗಿ ಪರಿವರ್ತಿತವಾಗುತ್ತಿರುವುದು ಖುಷಿಯ ವಿಚಾರ. ಇದಕ್ಕೆ ಮೂಲ ಕಾರಣ ಅಲ್ಲಲ್ಲಿ ಆಯೋಜನೆಗೊಳ್ಳುತ್ತಿರುವ ಹಲಸಿನ ಮೇಳಗಳು.

ಚಂದ್ರ, ಭೈರಸಂದ್ರ, ಲಾಲ್‌ ಬಾಗ್‌ ಮಧುರ, ರುದ್ರಾಕ್ಷಿ, ಸರ್ವಋತು ಅಷ್ಟೇ ಅಲ್ಲ ಅಂಟು ರಹಿತ ಹಲಸಿನ ಸಾಲುಗಳು. ಇನ್ನೇನು ಅಲ್ಲೇ ಬಿಸಿ ಬಿಸಿಯಾಗಿ ಎಣ್ಣೆಯಲ್ಲಿ ತಯಾರಾಗೋ ಹಲಸಿನ ತಿಂಡಿ ತಿನಿಸುಗಳು. ಇದೆಲ್ಲವನ್ನೂ ಕಂಡು ಖರೀದಿಗೆ ಮುಗಿಬಿದ್ದ ಗ್ರಾಹಕರು. ಈ ಎಲ್ಲ ದೃಶ್ಯ ಕಂಡುಬಂದಿದ್ದು  ಸಾಂಸ್ಕೃತಿಕ ನಗರಿ ಮೈಸೂರುನಲ್ಲಿ ನಡೆದ ಹಲಸಿನ ಮೇಳದಲ್ಲಿ.

ಫುಡ್‌ ಪ್ರಿಯರು ಹಲಸಿನ ತರಹೇವಾರಿ ತಿಂಡಿಗೆ ಫಿದಾ ಆದ್ರು. ವೆರೈಟಿ ಹಲಸಿನ ಹಣ್ಣುಗಳ ಜೊತೆಗೆ ಹಲಸಿನ ಹೋಳಿಗೆ, ಹಲಸಿನ ಚಿಪ್ಸು, ಹಲಸಿನಕಾಯಿ ಕಬಾಬು, ಹಲಸಿನ ಬಿರಿಯಾನಿ ಹೀಗೆ ಅನೇಕ ಹಲಸಿನ ಖಾದ್ಯಗಳನ್ನು ಸವಿಯೋ ಅವಕಾಶ ಆಹಾರ ಪ್ರಿಯರಿಗೆ ಸಿಕ್ಕಿತು. ಮೈಸೂರು ನಗರದ ನೆಕ್ಸಸ್ ಸೆಂಟರ್ ಸಿಟಿ ಮಾಲ್ ಇಂತಹದ್ದೊಂದು ಕಾರ್ಯಕ್ರಮ ಕಂಡು ಸಾಂಸ್ಕೃತಿಕ ನಗರಿಯ ಫುಡ್‌ ಪ್ರಿಯರಂತೂ ಫುಲ್‌ ಫಿದಾ ಆದ್ರು. ತಮ್ಮಿಷ್ಟದ ತಿಂಡಿ ತಿನಿಸುಗಳನ್ನ ಸವಿದು ಬಾಯಿ ಚಪ್ಪರಿಸಿಕೊಂಡರು.

ಚಂದ್ರ ಹಲಸು ಆಕರ್ಷಣೆ: ಇನ್ನು ವಿವಿಧ ತಳಿಯ ಹಲಸಿನ ಹಣ್ಣಿನ ಮಾರಾಟವೂ ನಡೆಯಿತು. ರಾಜ್ಯದ ಅನೇಕ ಜಿಲ್ಲೆಗಳಿಂದ ಮೈಸೂರಿಗೆ ಬಂದಿದ್ದ ರೈತರು, ಮಹಿಳಾ ಗುಂಪುಗಳು ಹಲಸಿನ ಪದಾರ್ಥ, ಸಿರಿಧಾನ್ಯ, ಕರಕುಶಲ ವಸ್ತುಗಳು, ಸಾವಯವ ಉತ್ಪನ್ನಗಳನ್ನು ಮಾರಾಟ ಮಾಡಿದರು.

ಇದರ ಜೊತೆಗೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ವಿಶೇಷವಾದ ಚಂದ್ರ ಹಲಸು ಹಬ್ಬಕ್ಕೆ ಬಂದಂತಹ ಜನರನ್ನು ತನ್ನತ್ತ ಆಕರ್ಷಿಸುತ್ತಿತ್ತು. ಹೀಗೆ ಮೈಸೂರಿನಲ್ಲಿ ನಡೆದ ಹಲಸು ಹಬ್ಬವು ಆಹಾರ ಪ್ರಿಯರ ಬಾಯಿ ರುಚಿ ಹೆಚ್ಚಿಸಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

22 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago