Advertisement
ಸುದ್ದಿಗಳು

#JackfruitFestival | ಮೇಣ ಇಲ್ಲದ ಹಲಸಿಗೆ ಮಾರು ಹೋದ ಹಲಸು ಪ್ರಿಯರು…! | ಮೈಸೂರಿನ ಹಲಸಿನ ಮೇಳಕ್ಕೆ ಜನ ಸಾಗರ |

Share

ಕೇವಲ ಬಡವರ ಪಾಲಿನ ಹಸಿವು ನೀಗಿಸುತ್ತಿದ್ದ ಹಲಸಿಗೆ ಈಗ ಅಂತರಾಷ್ಟ್ರೀಯ ಮನ್ನಣೆ. ಹಲಸು ಯಥೇಚ್ಚವಾಗಿ ಬೆಳೆಯುವ ಹಣ್ಣಾಗಿ, ವಾಣಿಜ್ಯ ಬೆಳೆಯಾಗಿ ಪರಿವರ್ತಿತವಾಗುತ್ತಿರುವುದು ಖುಷಿಯ ವಿಚಾರ. ಇದಕ್ಕೆ ಮೂಲ ಕಾರಣ ಅಲ್ಲಲ್ಲಿ ಆಯೋಜನೆಗೊಳ್ಳುತ್ತಿರುವ ಹಲಸಿನ ಮೇಳಗಳು.

ಚಂದ್ರ, ಭೈರಸಂದ್ರ, ಲಾಲ್‌ ಬಾಗ್‌ ಮಧುರ, ರುದ್ರಾಕ್ಷಿ, ಸರ್ವಋತು ಅಷ್ಟೇ ಅಲ್ಲ ಅಂಟು ರಹಿತ ಹಲಸಿನ ಸಾಲುಗಳು. ಇನ್ನೇನು ಅಲ್ಲೇ ಬಿಸಿ ಬಿಸಿಯಾಗಿ ಎಣ್ಣೆಯಲ್ಲಿ ತಯಾರಾಗೋ ಹಲಸಿನ ತಿಂಡಿ ತಿನಿಸುಗಳು. ಇದೆಲ್ಲವನ್ನೂ ಕಂಡು ಖರೀದಿಗೆ ಮುಗಿಬಿದ್ದ ಗ್ರಾಹಕರು. ಈ ಎಲ್ಲ ದೃಶ್ಯ ಕಂಡುಬಂದಿದ್ದು  ಸಾಂಸ್ಕೃತಿಕ ನಗರಿ ಮೈಸೂರುನಲ್ಲಿ ನಡೆದ ಹಲಸಿನ ಮೇಳದಲ್ಲಿ.

ಫುಡ್‌ ಪ್ರಿಯರು ಹಲಸಿನ ತರಹೇವಾರಿ ತಿಂಡಿಗೆ ಫಿದಾ ಆದ್ರು. ವೆರೈಟಿ ಹಲಸಿನ ಹಣ್ಣುಗಳ ಜೊತೆಗೆ ಹಲಸಿನ ಹೋಳಿಗೆ, ಹಲಸಿನ ಚಿಪ್ಸು, ಹಲಸಿನಕಾಯಿ ಕಬಾಬು, ಹಲಸಿನ ಬಿರಿಯಾನಿ ಹೀಗೆ ಅನೇಕ ಹಲಸಿನ ಖಾದ್ಯಗಳನ್ನು ಸವಿಯೋ ಅವಕಾಶ ಆಹಾರ ಪ್ರಿಯರಿಗೆ ಸಿಕ್ಕಿತು. ಮೈಸೂರು ನಗರದ ನೆಕ್ಸಸ್ ಸೆಂಟರ್ ಸಿಟಿ ಮಾಲ್ ಇಂತಹದ್ದೊಂದು ಕಾರ್ಯಕ್ರಮ ಕಂಡು ಸಾಂಸ್ಕೃತಿಕ ನಗರಿಯ ಫುಡ್‌ ಪ್ರಿಯರಂತೂ ಫುಲ್‌ ಫಿದಾ ಆದ್ರು. ತಮ್ಮಿಷ್ಟದ ತಿಂಡಿ ತಿನಿಸುಗಳನ್ನ ಸವಿದು ಬಾಯಿ ಚಪ್ಪರಿಸಿಕೊಂಡರು.

ಚಂದ್ರ ಹಲಸು ಆಕರ್ಷಣೆ: ಇನ್ನು ವಿವಿಧ ತಳಿಯ ಹಲಸಿನ ಹಣ್ಣಿನ ಮಾರಾಟವೂ ನಡೆಯಿತು. ರಾಜ್ಯದ ಅನೇಕ ಜಿಲ್ಲೆಗಳಿಂದ ಮೈಸೂರಿಗೆ ಬಂದಿದ್ದ ರೈತರು, ಮಹಿಳಾ ಗುಂಪುಗಳು ಹಲಸಿನ ಪದಾರ್ಥ, ಸಿರಿಧಾನ್ಯ, ಕರಕುಶಲ ವಸ್ತುಗಳು, ಸಾವಯವ ಉತ್ಪನ್ನಗಳನ್ನು ಮಾರಾಟ ಮಾಡಿದರು.

ಇದರ ಜೊತೆಗೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ವಿಶೇಷವಾದ ಚಂದ್ರ ಹಲಸು ಹಬ್ಬಕ್ಕೆ ಬಂದಂತಹ ಜನರನ್ನು ತನ್ನತ್ತ ಆಕರ್ಷಿಸುತ್ತಿತ್ತು. ಹೀಗೆ ಮೈಸೂರಿನಲ್ಲಿ ನಡೆದ ಹಲಸು ಹಬ್ಬವು ಆಹಾರ ಪ್ರಿಯರ ಬಾಯಿ ರುಚಿ ಹೆಚ್ಚಿಸಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

1 hour ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

7 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

8 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

18 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

19 hours ago