Advertisement
ಸುದ್ದಿಗಳು

#JackfruitFestival | ಮೇಣ ಇಲ್ಲದ ಹಲಸಿಗೆ ಮಾರು ಹೋದ ಹಲಸು ಪ್ರಿಯರು…! | ಮೈಸೂರಿನ ಹಲಸಿನ ಮೇಳಕ್ಕೆ ಜನ ಸಾಗರ |

Share

ಕೇವಲ ಬಡವರ ಪಾಲಿನ ಹಸಿವು ನೀಗಿಸುತ್ತಿದ್ದ ಹಲಸಿಗೆ ಈಗ ಅಂತರಾಷ್ಟ್ರೀಯ ಮನ್ನಣೆ. ಹಲಸು ಯಥೇಚ್ಚವಾಗಿ ಬೆಳೆಯುವ ಹಣ್ಣಾಗಿ, ವಾಣಿಜ್ಯ ಬೆಳೆಯಾಗಿ ಪರಿವರ್ತಿತವಾಗುತ್ತಿರುವುದು ಖುಷಿಯ ವಿಚಾರ. ಇದಕ್ಕೆ ಮೂಲ ಕಾರಣ ಅಲ್ಲಲ್ಲಿ ಆಯೋಜನೆಗೊಳ್ಳುತ್ತಿರುವ ಹಲಸಿನ ಮೇಳಗಳು.

ಚಂದ್ರ, ಭೈರಸಂದ್ರ, ಲಾಲ್‌ ಬಾಗ್‌ ಮಧುರ, ರುದ್ರಾಕ್ಷಿ, ಸರ್ವಋತು ಅಷ್ಟೇ ಅಲ್ಲ ಅಂಟು ರಹಿತ ಹಲಸಿನ ಸಾಲುಗಳು. ಇನ್ನೇನು ಅಲ್ಲೇ ಬಿಸಿ ಬಿಸಿಯಾಗಿ ಎಣ್ಣೆಯಲ್ಲಿ ತಯಾರಾಗೋ ಹಲಸಿನ ತಿಂಡಿ ತಿನಿಸುಗಳು. ಇದೆಲ್ಲವನ್ನೂ ಕಂಡು ಖರೀದಿಗೆ ಮುಗಿಬಿದ್ದ ಗ್ರಾಹಕರು. ಈ ಎಲ್ಲ ದೃಶ್ಯ ಕಂಡುಬಂದಿದ್ದು  ಸಾಂಸ್ಕೃತಿಕ ನಗರಿ ಮೈಸೂರುನಲ್ಲಿ ನಡೆದ ಹಲಸಿನ ಮೇಳದಲ್ಲಿ.

ಫುಡ್‌ ಪ್ರಿಯರು ಹಲಸಿನ ತರಹೇವಾರಿ ತಿಂಡಿಗೆ ಫಿದಾ ಆದ್ರು. ವೆರೈಟಿ ಹಲಸಿನ ಹಣ್ಣುಗಳ ಜೊತೆಗೆ ಹಲಸಿನ ಹೋಳಿಗೆ, ಹಲಸಿನ ಚಿಪ್ಸು, ಹಲಸಿನಕಾಯಿ ಕಬಾಬು, ಹಲಸಿನ ಬಿರಿಯಾನಿ ಹೀಗೆ ಅನೇಕ ಹಲಸಿನ ಖಾದ್ಯಗಳನ್ನು ಸವಿಯೋ ಅವಕಾಶ ಆಹಾರ ಪ್ರಿಯರಿಗೆ ಸಿಕ್ಕಿತು. ಮೈಸೂರು ನಗರದ ನೆಕ್ಸಸ್ ಸೆಂಟರ್ ಸಿಟಿ ಮಾಲ್ ಇಂತಹದ್ದೊಂದು ಕಾರ್ಯಕ್ರಮ ಕಂಡು ಸಾಂಸ್ಕೃತಿಕ ನಗರಿಯ ಫುಡ್‌ ಪ್ರಿಯರಂತೂ ಫುಲ್‌ ಫಿದಾ ಆದ್ರು. ತಮ್ಮಿಷ್ಟದ ತಿಂಡಿ ತಿನಿಸುಗಳನ್ನ ಸವಿದು ಬಾಯಿ ಚಪ್ಪರಿಸಿಕೊಂಡರು.

ಚಂದ್ರ ಹಲಸು ಆಕರ್ಷಣೆ: ಇನ್ನು ವಿವಿಧ ತಳಿಯ ಹಲಸಿನ ಹಣ್ಣಿನ ಮಾರಾಟವೂ ನಡೆಯಿತು. ರಾಜ್ಯದ ಅನೇಕ ಜಿಲ್ಲೆಗಳಿಂದ ಮೈಸೂರಿಗೆ ಬಂದಿದ್ದ ರೈತರು, ಮಹಿಳಾ ಗುಂಪುಗಳು ಹಲಸಿನ ಪದಾರ್ಥ, ಸಿರಿಧಾನ್ಯ, ಕರಕುಶಲ ವಸ್ತುಗಳು, ಸಾವಯವ ಉತ್ಪನ್ನಗಳನ್ನು ಮಾರಾಟ ಮಾಡಿದರು.

ಇದರ ಜೊತೆಗೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ವಿಶೇಷವಾದ ಚಂದ್ರ ಹಲಸು ಹಬ್ಬಕ್ಕೆ ಬಂದಂತಹ ಜನರನ್ನು ತನ್ನತ್ತ ಆಕರ್ಷಿಸುತ್ತಿತ್ತು. ಹೀಗೆ ಮೈಸೂರಿನಲ್ಲಿ ನಡೆದ ಹಲಸು ಹಬ್ಬವು ಆಹಾರ ಪ್ರಿಯರ ಬಾಯಿ ರುಚಿ ಹೆಚ್ಚಿಸಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

4 minutes ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

9 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

10 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

16 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

17 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

19 hours ago