MIRROR FOCUS

ನೆಲಕ್ಕುರುಳಿದ ಇಂಗ್ಲಿಷ್ ಬೋರ್ಡ್‍ಗಳು | ಕನ್ನಡ ನಾಮಫಲಕ ಬಳಕೆ ಕಡ್ಡಾಯಕ್ಕೆ ಕ ರ ವೇ ಒತ್ತಾಯ | ಇಂಗ್ಲಿಷ್, ಹಿಂದಿ ಬೋರ್ಡ್ ಹರಿದು ಆಕ್ರೋಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರು(Bengaluru) ಹಾಗೂ ಇನ್ನಿತರ ಪಟ್ಟಣ(City), ಹಳ್ಳಿ(Village) ಎಲ್ಲೆ ಹೋಗಿ ವಾಣಿಜ್ಯ ಕಟ್ಟಡಗಳ(Commercial buildings) ನಾಮಫಲಕ(Board) ಮಾತ್ರ ಇಂಗ್ಲಿಷಲ್ಲಿ ಇರುತ್ತದೆ. ಓದಕ್ಕೆ ಬರುತ್ತದೋ ಇಲ್ವೋ ಅದು ಎರಡನೇ ಮಾತು. ಒಟ್ಟು ಯಾರೇ ತಮ್ಮ ಒಂದು ಉದ್ಯಮ ಆರಂಭಿಸುವಾಗ ಅದರ ಬೋರ್ಡ್‌ ಮಾತ್ರ ಅದ್ಧೂರಿಯಾಗಿ ಇಂಗ್ಲಿಷ್‌ ನಲ್ಲಿ ಹಾಕಿಸುತ್ತಾರೆ. ಕನ್ನಡ ನಾಡಿನಲ್ಲಿ ಕನ್ನಡ ಬರೆಯುವವರ ಸಂಖ್ಯೆ ಕಡಿಮೆಯಾಗಿದೆ. ಇದನ್ನು ಖಂಡಿಸುತ್ತಿರುವ ಕನ್ನಡ ಸಂಘಟನೆಗಳು ಇಂದು ನಗರದಲ್ಲಿ ಅಬ್ಬರಿಸಿವೆ. ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ 60% ಕನ್ನಡಕ್ಕೆ (Kannada Board) ಸರ್ಕಾರದ ಸೂಚನೆ ಇದ್ದರೂ ನಿರ್ಲಕ್ಷ್ಯ ಮಾಡುತ್ತಿರುವವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು (Karnataka Rakshana Vedike) ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರಾಣವನ್ನೂ ಲೆಕ್ಕಿಸದೇ ಬೃಹತ್ ಜಾಹೀರಾತು ಫಲಕ ಏರಿ ಇಂಗ್ಲಿಷ್‍ನಲ್ಲಿದ್ದ ಬೋರ್ಡ್ ಅನ್ನು ಹರಿದು ಹಾಕಿದ್ದಾರೆ.

Advertisement

ಕರವೇ ನಾರಾಯಣಗೌಡ (Karave Narayana Gowda) ಬಣದ ಕಾರ್ಯಕರ್ತರು ನಾಮಫಲಕ ಮಹಾ ಅಭಿಯಾನ ಆರಂಭಿಸಿದ್ದು, ರಾಜ್ಯದ ವಿವಿಧ ಭಾಗಗಳ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಅಂಗಡಿ ಹಾಗೂ ಮಾಲ್‍ಗಳ ನಾಮಫಲಕಗಳಲ್ಲಿ 60% ಆದ್ಯತೆ ಕೊಡಬೇಕು. ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆರವು ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರು ಮಾಲ್ ಒಂದರ ಮುಂಭಾಗದ ಫ್ಲೈಓವರ್ ಮೇಲೆ ನಿಂತು ಮಾಲ್ ಕಡೆಗೆ ಚಪ್ಪಲಿ ತೂರಿದ್ದಾರೆ. ಮಾಲ್‍ಗಳಿಗೆ ರಕ್ಷಣೆ ಒದಗಿಸಲಾಗಿದ್ದು, 100ಕ್ಕೂ ಹೆಚ್ಚು ಪೊಲೀಸರು ಮಾಲ್ ಬಳಿ ಸುತ್ತುವರಿದಿದ್ದಾರೆ. ಕೆಲವೆಡೆ ಪ್ರತಿಭಟನಾಕಾರರು ಕನ್ನಡ ಇಲ್ಲದ ನಾಮಫಲಕಗಳಿಗೆ ಮಸಿ ಬಳಿದಿದ್ದಾರೆ. ಅಲ್ಲದೇ ನಾಮಫಲಕಗಳನ್ನು ಒಡೆದು ಹಾಕಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದಕ್ಕೂ ಕಾರಣವಾಗಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ರುಚಿನೂ ತೋರಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಪಿ ಲಕ್ಷ್ಮಿಪ್ರಸಾದ್, ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಯದಂತೆ 500 ಪೊಲೀಸರನ್ನು ನಿಯೋಜಿಸಲಾಗಿದೆ. 10 ಬಿಎಂಟಿಸಿ ಬಸ್‍ಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ನ್ಯಾಯಾಲಯದ ಆದೇಶ ಇರುವುದರಿಂದ ರ‍್ಯಾಲಿಗೆ ಅವಕಾಶ ಕೊಡುವುದಿಲ್ಲ. ಇದನ್ನೂ ಮೀರಿ ರಾಲಿಗೆ ಮುಂದಾದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

The number of Kannada writers in Kannada Nadi is less. Kannada organizations condemning this have shouted in the city today. Activists of Karnataka Rakshana Vedike staged a protest against those who are ignoring the government’s instructions to have 60% Kannada on the nameplates of commercial shops (Kannada Board). At this time, he raised a huge billboard and tore down the board in English without risking his life. – ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ

ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…

9 hours ago

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

10 hours ago

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ

ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…

10 hours ago

ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ

ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…

10 hours ago

ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್

ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…

10 hours ago

ಬಾಹ್ಯಾಕಾಶದಲ್ಲಿ ಹೆಸರುಕಾಳು, ಮೆಂತ್ಯ ಮೊಳಕೆಯೊಡೆಯುವ ಪ್ರಯೋಗ ಪ್ರಗತಿಯಲ್ಲಿ – ನಾಸಾ ಸ್ಪಷ್ಟನೆ

ಬಾಹ್ಯಕಾಶದಲ್ಲಿ   ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…

11 hours ago