Advertisement
MIRROR FOCUS

ನೆಲಕ್ಕುರುಳಿದ ಇಂಗ್ಲಿಷ್ ಬೋರ್ಡ್‍ಗಳು | ಕನ್ನಡ ನಾಮಫಲಕ ಬಳಕೆ ಕಡ್ಡಾಯಕ್ಕೆ ಕ ರ ವೇ ಒತ್ತಾಯ | ಇಂಗ್ಲಿಷ್, ಹಿಂದಿ ಬೋರ್ಡ್ ಹರಿದು ಆಕ್ರೋಶ |

Share

ಬೆಂಗಳೂರು(Bengaluru) ಹಾಗೂ ಇನ್ನಿತರ ಪಟ್ಟಣ(City), ಹಳ್ಳಿ(Village) ಎಲ್ಲೆ ಹೋಗಿ ವಾಣಿಜ್ಯ ಕಟ್ಟಡಗಳ(Commercial buildings) ನಾಮಫಲಕ(Board) ಮಾತ್ರ ಇಂಗ್ಲಿಷಲ್ಲಿ ಇರುತ್ತದೆ. ಓದಕ್ಕೆ ಬರುತ್ತದೋ ಇಲ್ವೋ ಅದು ಎರಡನೇ ಮಾತು. ಒಟ್ಟು ಯಾರೇ ತಮ್ಮ ಒಂದು ಉದ್ಯಮ ಆರಂಭಿಸುವಾಗ ಅದರ ಬೋರ್ಡ್‌ ಮಾತ್ರ ಅದ್ಧೂರಿಯಾಗಿ ಇಂಗ್ಲಿಷ್‌ ನಲ್ಲಿ ಹಾಕಿಸುತ್ತಾರೆ. ಕನ್ನಡ ನಾಡಿನಲ್ಲಿ ಕನ್ನಡ ಬರೆಯುವವರ ಸಂಖ್ಯೆ ಕಡಿಮೆಯಾಗಿದೆ. ಇದನ್ನು ಖಂಡಿಸುತ್ತಿರುವ ಕನ್ನಡ ಸಂಘಟನೆಗಳು ಇಂದು ನಗರದಲ್ಲಿ ಅಬ್ಬರಿಸಿವೆ. ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ 60% ಕನ್ನಡಕ್ಕೆ (Kannada Board) ಸರ್ಕಾರದ ಸೂಚನೆ ಇದ್ದರೂ ನಿರ್ಲಕ್ಷ್ಯ ಮಾಡುತ್ತಿರುವವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು (Karnataka Rakshana Vedike) ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರಾಣವನ್ನೂ ಲೆಕ್ಕಿಸದೇ ಬೃಹತ್ ಜಾಹೀರಾತು ಫಲಕ ಏರಿ ಇಂಗ್ಲಿಷ್‍ನಲ್ಲಿದ್ದ ಬೋರ್ಡ್ ಅನ್ನು ಹರಿದು ಹಾಕಿದ್ದಾರೆ.

ಕರವೇ ನಾರಾಯಣಗೌಡ (Karave Narayana Gowda) ಬಣದ ಕಾರ್ಯಕರ್ತರು ನಾಮಫಲಕ ಮಹಾ ಅಭಿಯಾನ ಆರಂಭಿಸಿದ್ದು, ರಾಜ್ಯದ ವಿವಿಧ ಭಾಗಗಳ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಅಂಗಡಿ ಹಾಗೂ ಮಾಲ್‍ಗಳ ನಾಮಫಲಕಗಳಲ್ಲಿ 60% ಆದ್ಯತೆ ಕೊಡಬೇಕು. ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆರವು ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರು ಮಾಲ್ ಒಂದರ ಮುಂಭಾಗದ ಫ್ಲೈಓವರ್ ಮೇಲೆ ನಿಂತು ಮಾಲ್ ಕಡೆಗೆ ಚಪ್ಪಲಿ ತೂರಿದ್ದಾರೆ. ಮಾಲ್‍ಗಳಿಗೆ ರಕ್ಷಣೆ ಒದಗಿಸಲಾಗಿದ್ದು, 100ಕ್ಕೂ ಹೆಚ್ಚು ಪೊಲೀಸರು ಮಾಲ್ ಬಳಿ ಸುತ್ತುವರಿದಿದ್ದಾರೆ. ಕೆಲವೆಡೆ ಪ್ರತಿಭಟನಾಕಾರರು ಕನ್ನಡ ಇಲ್ಲದ ನಾಮಫಲಕಗಳಿಗೆ ಮಸಿ ಬಳಿದಿದ್ದಾರೆ. ಅಲ್ಲದೇ ನಾಮಫಲಕಗಳನ್ನು ಒಡೆದು ಹಾಕಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದಕ್ಕೂ ಕಾರಣವಾಗಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ರುಚಿನೂ ತೋರಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಪಿ ಲಕ್ಷ್ಮಿಪ್ರಸಾದ್, ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಯದಂತೆ 500 ಪೊಲೀಸರನ್ನು ನಿಯೋಜಿಸಲಾಗಿದೆ. 10 ಬಿಎಂಟಿಸಿ ಬಸ್‍ಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ನ್ಯಾಯಾಲಯದ ಆದೇಶ ಇರುವುದರಿಂದ ರ‍್ಯಾಲಿಗೆ ಅವಕಾಶ ಕೊಡುವುದಿಲ್ಲ. ಇದನ್ನೂ ಮೀರಿ ರಾಲಿಗೆ ಮುಂದಾದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

The number of Kannada writers in Kannada Nadi is less. Kannada organizations condemning this have shouted in the city today. Activists of Karnataka Rakshana Vedike staged a protest against those who are ignoring the government’s instructions to have 60% Kannada on the nameplates of commercial shops (Kannada Board). At this time, he raised a huge billboard and tore down the board in English without risking his life. – ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

6 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

6 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

21 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago