ಇತ್ತೀಚೆಗೆ ಮೊಬೈಲ್ಗಳ(Mobile), ಲ್ಯಾಪ್ಟಾಪ್(Lap top), ಕಂಪ್ಯೂಟರ್(Computer) ಮೂಲಕ ವಿವಿಧ ರೀತಿಯಲ್ಲಿ ಹಣ(Money) ಕಳೆದುಕೊಳ್ಳುತ್ತಿರುವವರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ. ಮೊದಲೆಲ್ಲಾ ಎಲ್ಲೋ ಯಾರೋ ಹಾಗೆ ದುಡ್ಡು ಕಳಕೊಂಡ್ರು.. ಹೀಗೆ ದುಡ್ಡು ಕಳಕೊಂಡ್ರು ಅಂತ ನ್ಯೂಸ್ ಕೇಳುತ್ತಿದ್ದೆವು. ಈಗ ನೋಡಿದರೆ ನಮ್ಮ ಸುತ್ತಮುತ್ತವೇ ಹಣ ಕಳೆದುಕೊಳ್ಳುತ್ತಿರುವುದು, ಮೋಸ ಹೋಗುತ್ತಿರುವುದು ಕಾಣಿಸುತ್ತಿದೆ. ಯಾವ ರೀತಿಯಲ್ಲಿ ವಂಚನೆ(Fraud) ಮಾಡುತ್ತಾರೆ ಅನ್ನೋದೆ ತಿಳಿಯದ ರೀತಿಯಲ್ಲಿ ಜನರನ್ನು ಸೈಬರ್ ವಂಚಕರು ಟಾರ್ಗೆಟ್(Target) ಮಾಡುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಸೈಬರ್ ವಂಚನೆಗಳಿಂದ (Cyber Fraud) ಭಾರತೀಯರು(Indians) 25,000 ಕೋಟಿ ರೂ. ಕಳೆದುಕೊಂಡಿದ್ದಾರೆ. ಇದು ಸಿಕ್ಕಿಂನ(Sikkim) ವಾರ್ಷಿಕ ಬಜೆಟ್ಗಿಂತ(Budget) ದ್ವಿಗುಣವಾಗಿದೆ ಎಂದು ಕೇಂದ್ರ ಸರ್ಕಾರದ(Central Govt) ಮೂಲಗಳು ಹೇಳಿವೆ.
ಎಲ್ಲಾ ಕಂಪನಿಗಳು ಆರಂಭಿಕ ಹಂತದಲ್ಲಿಯೂ ಸಹ ವಿವಿಧ ರೀತಿಯ ವಿವರಗಳನ್ನು ಕೇಳುತ್ತವೆ. ಇದು ಸೈಬರ್ ವಂಚನೆಯನ್ನು ತಡೆಯುವ ಪ್ರಕ್ರಿಯೆಯನ್ನು ವಿಳಂಬಗೊಳಿಸುತ್ತದೆ. ವಂಚಕರು ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳನ್ನು ಆಂಪ್ಲಿಫೈಯರ್ಗಳಾಗಿ ಬಳಸುತ್ತಿದ್ದಾರೆ. ಇದರಲ್ಲಿ ವಂಚಕರು ಸುಲಭವಾಗಿ ಜನರನ್ನು ಬಲಿಪಶುಗಳನ್ನಾಗಿ ಮಾಡುತ್ತಿದ್ದಾರೆ ಎಂದು ಸಭೆಯಲ್ಲಿ ಭಾಗಿಯಾಗಿದ್ದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಏಮ್ಸ್, ಐಸಿಎಮ್ಆರ್ ಸೈಬರ್ ದಾಳಿಯಿಂದ ಸಾಲ ನೀಡುವ ಅಪ್ಲಿಕೇಶನ್ ವಂಚನೆಗಳವರೆಗೆ ರಾಷ್ಟ್ರೀಯ ಸೈಬರ್ ಅಪರಾಧ ಪೋರ್ಟಲ್ (NCRP) 2020 ರಿಂದ ಫೆಬ್ರವರಿ 2024ರ ನಡುವೆ 31 ಲಕ್ಷ ದೂರುಗಳನ್ನು ಸ್ವೀಕರಿಸಿದೆ. ಕೇಂದ್ರ ಸರ್ಕಾರದ ಅಧಿಕೃತ ಸಂವಹನದ ಪ್ರಕಾರ, ಸೈಬರ್ ವಂಚನೆ ಪ್ರಕರಣಗಳಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಬಂಧನವಾಗುತ್ತಿರುವ ಹಿನ್ನೆಲೆ ಈ ಬೆಳವಣಿಗೆ ಹೆಚ್ಚುತ್ತಿದೆ ಎನ್ನಲಾಗಿದೆ. ವಿವಿಧ ಕಾನೂನು ಜಾರಿ ಸಂಸ್ಥೆಗಳು ದಾಖಲಾದ ಪ್ರಕರಣಗಳು ಅಥವಾ ಎಫ್ಐಆರ್ಗಳು 66,000 ಕ್ಕಿಂತ ಹೆಚ್ಚಿವೆ. ಆದರೆ ಈ ವರ್ಷದವರೆಗೆ ಕೇವಲ 500 ಪ್ರಕರಣಗಳಲ್ಲಿ ಬಂಧನವಾಗಿದೆ. ಈ ಮೂಲಕ 1% ವಂಚಕರ ಬಂಧನವಾಗಿರುವುದು ಈ ಬೆಳವಣಿಗೆಗೆ ಕಾರಣವಾಗಿದೆ. ಸಾಲದ ಆ್ಯಪ್ಗಳು, ಪೊಂಜಿ ಸ್ಕೀಮ್ಗಳು ಮತ್ತು ಸ್ಟಾಕ್ ಟ್ರೇಡಿಂಗ್ ಗ್ರೂಪ್ಗಳಲ್ಲಿ ನಕಲಿ ಜಾಹೀರಾತುಗಳನ್ನು ಪೂರ್ವಭಾವಿಯಾಗಿ ಪತ್ತೆಹಚ್ಚಲು ಮತ್ತು ಅದರ ವಿರುದ್ಧ ಕ್ರಮ ಕೈಗೊಳ್ಳಲು ಸಾಮಾಜಿಕ ಮಾಧ್ಯಮಗಳಿಗೆ ಸರ್ಕಾರ ತಿಳಿಸಿದೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…