ಟೌಕ್ಟೇ ಚಂಡಮಾರುತದ ಬಳಿಕ ಇನ್ನೊಂದು ಚಂಡಮಾರುತದ ಭೀತಿ | ಮೇ.23 ನಂತರ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ |

May 18, 2021
8:46 PM

ಟೌಕ್ಟೇ ಚಂಡಮಾರುತದ ಬಳಿಕ ಇದೀಗ ಬಂಗಾಳಕೊಲ್ಲಿಯಲ್ಲಿ  ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಮೇ.23  ರ ಸುಮಾರಿಗೆ ಈ ಸ್ಪಷ್ಟತೆ ದೊರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸುಳಿವು ನೀಡಿದೆ.

Advertisement

ಅರಬೀ ಸಮುದ್ರದಲ್ಲಿ  ಉಂಟಾಗಿರುವ ಟೌಕ್ಟೇ ಚಂಡಮಾರುತ ಆತಂಕ ಸೃಷ್ಟಿಸಿ ಗುಜರಾತ್‌ ಸಹಿತ ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿ ಇದೀಗ ಬಂಗಾಳಕೊಲ್ಲಿಯಲ್ಲಿ  ಇನ್ನೊಂದು ಚಂಡಮಾರುತ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಪೂರ್ವ-ಮಧ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಚಂಡಮಾರುತವು ತಮಿಳುನಾಡು, ಒಡಿಸ್ಸಾ ಪ್ರದೇಶಗಳಲ್ಲಿ  ಹಾನಿ ಉಂಟು ಮಾಡುವ ಸಾಧ್ಯತೆ ಇದೆ. ಒಡಿಸ್ಸಾ ರಾಜ್ಯಕ್ಕೆ ಪ್ರತೀ ಬಾರಿಯೂ ಚಂಡಮಾರುತ ಅಪ್ಪಳಿಸುತ್ತಲೇ ಇರುತ್ತದೆ.

ಈ ಬಾರಿ ಮಳೆಗಾಲದ ಪೂರ್ವದಲ್ಲಿ ಉಂಟಾಗುತ್ತಿರುವ ಚಂಡಮಾರುತದ ಕಾರಣದಿಂದ ಮಳೆಗಾಲ ಆರಂಭದಲ್ಲಿ  ವ್ಯತ್ಯಯವಾಗುವ ಸಾಧ್ಯತೆಯೂ ಇದೆ.

 

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |
April 29, 2025
9:00 AM
by: The Rural Mirror ಸುದ್ದಿಜಾಲ
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |
April 28, 2025
10:21 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 28-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಮಳೆ | ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣ
April 28, 2025
2:22 PM
by: ಸಾಯಿಶೇಖರ್ ಕರಿಕಳ
ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ
April 28, 2025
7:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group