ಹವಾಮಾನ ವರದಿ | 30-11-2024 | ರಾಜ್ಯದಲ್ಲಿ ಮೋಡದ ವಾತಾವರಣ | ಇಂದಿನಿಂದ ಚಳಿಯ ವಾತಾವರಣ ಕಡಿಮೆ |

November 30, 2024
1:18 PM
ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ 4 ರ ತನಕ ದಕ್ಷಿಣ ಒಳನಾಡು, ಕೊಡಗು, ಹಾಸನ, ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ

01.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಇವತ್ತಿನಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. 

ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿರುವ ಪೆಂಗಾಲ್ ಚಂಡಮಾರುತವು ಡಿಸೆಂಬರ್ 1 ರಂದು ಪಾಂಡಿಚೇರಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 2 ಹಾಗೂ 3 ರಂದು ತಮಿಳುನಾಡು – ಕರ್ನಾಟಕ ಗಡಿ ಭಾಗಗಳಲ್ಲಿ ಸಾಗಿ ಕೇರಳದ ಕೋಜಿಕ್ಕೊಡು ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ.

ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ 4 ರ ತನಕ ದಕ್ಷಿಣ ಒಳನಾಡು, ಕೊಡಗು, ಹಾಸನ, ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದ್ದರೆ ಉತ್ತರ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಚಂಡಮಾರುತವು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿದ ನಂತರವೂ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?
January 9, 2026
10:08 PM
by: ದ ರೂರಲ್ ಮಿರರ್.ಕಾಂ
ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ
January 9, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror