01.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಇವತ್ತಿನಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.
ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿರುವ ಪೆಂಗಾಲ್ ಚಂಡಮಾರುತವು ಡಿಸೆಂಬರ್ 1 ರಂದು ಪಾಂಡಿಚೇರಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 2 ಹಾಗೂ 3 ರಂದು ತಮಿಳುನಾಡು – ಕರ್ನಾಟಕ ಗಡಿ ಭಾಗಗಳಲ್ಲಿ ಸಾಗಿ ಕೇರಳದ ಕೋಜಿಕ್ಕೊಡು ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ.
ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ 4 ರ ತನಕ ದಕ್ಷಿಣ ಒಳನಾಡು, ಕೊಡಗು, ಹಾಸನ, ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದ್ದರೆ ಉತ್ತರ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಚಂಡಮಾರುತವು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿದ ನಂತರವೂ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…